Breaking News

ತೃತೀಯ ಭಾಷೆ “ಹಿಂದಿ” ವಿಷಯಕ್ಕೆ ಗ್ರೇಡಿಂಗ್ ಪದ್ಧತಿ – ವಿದ್ಯಾರ್ಥಿಗಳಲ್ಲಿ ಗೊಂದಲ – ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ

ಪ್ರತಿಧ್ವನಿ ಯಲ್ಲಾಪುರ : ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆ ಮಾರ್ಚ 31 ರ ಮಂಗಳವಾರ ಜರುಗುತ್ತಿರುವ ಸಂದರ್ಭದಲ್ಲಿ ಸರಕಾರ ಏಕಾಏಕಿಯಾಗಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡಿಂಗ್ ಪದ್ಧತಿಯನ್ನು ಜಾರಿಗೆ ತರಲು ಕೈಕೊಂಡ ನಿರ್ಧಾರ ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ಗೊಂದಲಕ್ಕೆ ಕಾರಣವಾಗಿದೆ ಮತ್ತು ಇದು ದುಡಿಕಿನ ನಿರ್ಧಾರ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಯಲ್ಲಿ ಏನೇ ಬದಲಾವಣೆ ತರುವದಿದ್ದರೂ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಾಡಬೇಕೆ ವಿನಃ ಕೊನೆಯ ಹಂತದಲ್ಲಿ ಅಲ್ಲ. ಹೀಗಾಗಿ ಇದು ಸರ್ಕಾರದ ಏಕಪಕ್ಷೀಯ ಹಾಗು ಅವೈಜ್ಞಾನಿಕ ಕ್ರಮವಾಗಿದೆ. ಈ ರೀತಿಯ ನಿರ್ಧಾರದಿಂದ ಹಿಂದಿ ಭಾಷಾ ಶಿಕ್ಷಕರು ಮುಂಬರುವ ದಿನಮಾನದಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಆತಂಕ ಹಾಗೂ ಭಯದ ವಾತಾವರಣದಲ್ಲಿ ಇದ್ದಾರೆ.

ನಮ್ಮ ದೇಶದಲ್ಲಿ ಆರಂಭದ ದಿನದಿಂದಲೂ ತ್ರೀಭಾಷಾ ಸೂತ್ರ ಪಾಲಿಸುತ್ತಾ ಬಂದಿದ್ದು, ಈಗ ಏಕಾಏಕಿಯಾಗಿ ದ್ವಿಭಾಷಾ ಸೂತ್ರಕ್ಕೆ ಬದಲಾವಣೆ ಮಾಡುವುದರಿಂದ ಆಗುವ ಸಾಧಕ ಬಾಧಕಗಳ ಕುರಿತು ಪುನರ್ ಚಿಂತನೆ ಮಾಡಲು ಆಗ್ರಹಿಸಿದ್ದಾರೆ. ಭಾಷಾ ಸೂತ್ರದ ವಿಷಯಕ್ಕೆ ರಾಜಕೀಯ ಬೆರೆಸಬಾರದು ಎಂದು ಹೇಳಿ ಸರ್ಕಾರ ಏನೇ ನಿರ್ಣಯ ಕೈಗೊಂಡರೂ ಮಕ್ಕಳ ಭವಿಷ್ಯ ಹಿತದೃಷ್ಟಿಯಿಂದ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವರು.

ಈ ಸಂದರ್ಭದಲ್ಲಿ ಹೋಲಿ ರೋಜರಿ ವಿಜ್ಞಾನ ಬಳಗದ ಜಿಲ್ಲಾಧ್ಯಕ್ಷ  ಹಾಗು ವಿಜ್ಞಾನ ಪರಿಷತ್ತು ಸಂಚಾಲಕ ರಾಜಶೇಖರ್, ಹಿಂದಿ ಶಿಕ್ಷಕ ಮತ್ತು ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಹಾಗು ಹಿರಿಯ ಪತ್ರಕರ್ತ ಶಂಕರ ಭಟ್ ತಾರಿಮಕ್ಕಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *