
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಣ್ಣ ಪಾನಿಗುಂಡಿ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ಮತ್ತು ಉದಯಕಾಲ ಸುದ್ದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ತಾಲೂಕು ದಂಢಾದಿಕಾರಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಭೇಟಿಯಾಗಿ ವಾಸ್ತವಿಕತೆ ಅರಿತರು.

ತಹಶಿಲ್ದಾರ್ ಚಂದ್ರಶೇಖರ ಹೊಸಮನಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಪ್ರತ್ಯಕ್ಷವಾಗಿ ಕಂಡರು.

ಶೀಘ್ರವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಅಂಗನವಾಡಿ ಹಾಗು ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ವಿಟ್ಟು ದೊಂಡು ಪಟಕಾರೆ ಮತ್ತು ಸ್ಥಳೀಯ ಪ್ರಮುಖರು ಸಾರ್ವಜನಿಕರು ಮತ್ತು ಮಕ್ಕಳು ಉಪಸ್ಥಿತರಿದ್ದರು

ಸಣ್ಣ ಪಾನಿಗುಂಡಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ್ದು ಸಮಸ್ಯೆಗಳಿರುವುದು ಅರಿವಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ಶೀಘ್ರವಾಗಿ ಬಗೆಹರಿಸಬೇಕಿದ್ದು ಕೊಳವೆ ಬಾವಿ ಕೊರೆಸುವ ಬಗ್ಗೆ ಮಾತನಾಡಲಿದ್ದೇನೆ. ಉಳಿದಂತೆ ಅರಣ್ಯ ದಾರಿಯಲ್ಲಿ ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿಗೆ ತೆರಳುವುದು ಕಷ್ಟವಾಗಿರುವುದರ ಕುರಿತು ಗ್ರಾಮಸ್ಥರು ಮನವಿ ಮಾಡಿದ್ದಾರೆ ಅದರಂತೆ ಎಷ್ಟು ಮಕ್ಕಳಿದ್ದರೆ ಗ್ರಾಮದಲ್ಲಿ ಅ
ಅಂಗನವಾಡಿ ಪ್ರಾರಂಭ ಮಾಡಬಹುದೆಂಬುದನ್ನು ಚರ್ಚಿಸುತ್ತೇನೆ, ರಸ್ತೆ ಬಗ್ಗೆಯೂ ಕೂಡ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದೇನೆ.
ಚಂದ್ರಶೇಖರ ಹೊಸಮನಿ, ತಹಶಿಲ್ದಾರ್, ಯಲ್ಲಾಪುರ












Prathidvani Yellapura