

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಆನಗೋಡು ಹಾಗೂ ಕುಚಗಾಂವ ಗ್ರಾಮದಲ್ಲಿರುವ ಜಿಯೋ ಟವರುಗಳಲ್ಲಿ ಜನರೇಟರಿಗೆ ಅಳವಡಿಸಿದ ಟಾಟಾ ಹಾಗೂ ಎಕ್ಸೈಡ್ ಕಂಪನಿಯ 25,೦೦೦ರೂ ಮೌಲ್ಯದ ಎರಡು ಬ್ಯಾಟರಿಗಳನ್ನು ಕದ್ದೊಯ್ದಿರುವ ಕುರಿತು ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ಯಲ್ಲಾಪುರ ಪೊಲೀಸರು ಖಚಿತ ಮಾಹಿತಿಯನ್ನಾಧರಿಸಿ ಯಲ್ಲಾಪುರ ನೂತನನಗರ ಜಡ್ಡಿಯ ಶಂಕರ ಯಲ್ಲಪ್ಪ ಗಣಾಚಾರಿ, ಸಂತೋಷ ಭೀಮಪ್ಪ ಮಲ್ಲಸಣ್ಣನವರ ಎಂಬ ಇಬ್ಬರನ್ನು ಬಂಧಿಸಿ ಕಳ್ಳತನ ಮಾಡಲಾದ ಎರಡು ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು 5೦,೦೦೦ ಬೆಲೆಯ ಸ್ಪ್ಲೆಂಡರ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರಕನಡ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕುಮಾರ, ಶಿರಸಿಯ ಪೊಲೀಸ್ ಉಪಾಧೀಕ್ಷಕ ಗಣೇಶ ಕೆ.ಎಲ್, ಮಾರ್ಗದರ್ಶನದಲ್ಲಿ ಯಲ್ಲಾಪುರ ಪಿಐ ರಂಗನಾಥ ನೀಲಮ್ಮನವರ್ ನೇತೃತ್ವದಲ್ಲಿ ಪಿಎಸ್ಐಗಳಾದ ರವಿ ಗುಡ್ಡಿ, ನಿರಂಜನ ಹೆಗಡೆ, ಎಎಸ್ಐ ಗಣಪತಿ ಬೆನಕಟ್ಟಿ, ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹ್ಮದ ಶಫಿ, ಗಿರೀಶ ಲಮಾಣಿ, ಪರಶುರಾಮ ಕಾಳೆ, ಪರಮೇಶ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.





