


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಹಮ್ಮಿಕೊಂಡ ಗಹಲಕ್ಷ್ಮಿ ಯೋಜನೆ ಪ್ರಾರಂಭ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಹೆಣ್ಣು ತನ್ನ ಕೌಶಲ್ಯದ ಮೂಲಕ ಅವಿರತ ಸಾಧನೆಯ ಮೂಲಕ ತನ್ನ ಅಸ್ತಿತ್ವದ ಶ್ರೇಷ್ಟತೆಯನ್ನು ಜಗತ್ತಿಗೆ ತೋರುತ್ತ ಬಂದಿದ್ದಾಳೆ. ಪ್ರಸ್ತುತ ದಿನಮಾನಗಳು ಮಹಿಳಾ ದಿನಗಳಾಗಿದ್ದು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿರುವುದು ಆಕೆಗೆ ಮತ್ತಷ್ಟು ಬಲಬಂದಂತಾಗಿದೆ. ಸರ್ಕಾರದ ಉದ್ದೇಶ ಈಡೇರಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಫಲಾನುಭವಿ ಮಹಿಳೆಯರಿಗೆ ಸವಲತ್ತು ದೊರಕಿಸಿಕೊಡುವಂತಹ ಕಾರ್ಯವಾಗಬೇಕಿದೆ ಎಂದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಕುರಿತು ರಾಜ್ಯ ವಿಕೇಂದ್ರೀಕರಣ ಯೋಜನಾ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿದರು.

ಸಾಂಕೇತಿಕವಾಗಿ ಗೃಹಲಕ್ಷ್ಮಿ ಯೋಜನೆಯ ಫಲಸನುಭವಿ ಮಹಿಳೆಯರಿಗೆ ಆದೇಶಪತ್ರ ವಿತರಿಸಿದರು.

ತಹಶಿಲ್ದಾರ್ ಗುರುರಾಜ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಗದೀಶ್ ಕಮ್ಮಾರ್, ತಾಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ್, ಬಿ.ಆರ್.ಸಿ ಶ್ರೀರಾಮ ಹೆಗಡೆ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುನಂದದಾಸ್, ಸದಸ್ಯರಾದ ರಾಧಾಕೃಷ್ಣ ನಾಯ್ಕ್, ಕೈಸರ್ ಸೈಯದ್, ನರ್ಮದಾ ನಾಯ್ಕ್, ಜ್ಯೋತಿ ನಾಯ್ಡು, ಹಲೀಮ ಕಕ್ಕೇರಿ, ಕುಮುದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು.

ವೈಟಿಎಸ್ಎಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುನಿಲ್ ಎಸ್ ಗಾವಡೆ ಸ್ವಾಗತಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಫೀಕ ಹಳ್ಳೂರ್ ಪ್ರಾಸ್ತಾವಿಕ ನುಡಿದರು. ಶಿಕ್ಷಕರಾದ ವಿನೋದ್ ಭಟ್ ಮತ್ತು ಸಂಜೀವ್ ಹೊಸ್ಕೇರಿ ನಿರೂಪಿಸಿ ವಂದಿಸಿದರು.

ರಾಜ್ಯ ಸರ್ಕಾರದಿಂದ ಮೈಸೂರಿನಲ್ಲಿ ಆಯೋಜನೆಗೊಂಡ ಗೃಹಲಕ್ಷ್ಮಿ ಯೋಜನೆಯ ಉದ್ಣಘಾಟನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದ ಕಾರ್ಯಕ್ರಮದ ದೃಶ್ಯಾವಳಿಗಳನ್ನು ಎಲ್ಇಡಿ ಪರದೆ ಮೂಲಕ ನೆರೆದಿದ್ದ ಜನಸಮೂಹಕ್ಕೆ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಹಿಳಾ ಪ್ರಾಬಲ್ಯ ಎದ್ದು ಕಾಣುತ್ತಿತ್ತು ಮುಖದಲ್ಲಿ ಸಂತಸ ಮನೆಮಾಡಿತ್ತು.






