

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಮಾವಿನಕಟ್ಟಾದಲ್ಲಿ ತರಕಾರಿ ಅಂಗಡಿಯೊಳಗೆ ಮಲಗಿದ್ದಾಕೆಗೆ ನಾಗರ ಹಾವು ಕಡಿದಿದ್ದು ಚಿಕಿತ್ಸೆಗಾಗಿ ಶಿರಸಿ ಪಂಡಿತ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಯಮುನಾ ಸುರೇಶ್ ಸಿದ್ದಿ (32 ) ಎಂಬಾಕೆಯೆ ಸಾವು ಕಂಡ ದುರ್ದೈವಿಯಾಗಿದ್ದು ಮಂಗಳವಾರ ಮಾವಿನಕಟ್ಟದಲ್ಲಿರುವ ತನ್ನ ತರಕಾರಿ ಅಂಗಡಿಯೊಳಗೆ ಮಲಗಿದ್ದ ವೇಳೆ ನಾಗರ ಹಾವು ಕಚ್ಚಿದೆ. ವಿಷಯ ತಿಳಿದ ಸ್ಥಳೀಯ ಗ್ರಾಮಸ್ಥರು ಚಿಕಿತ್ಸೆಗಾಗಿ ಮಂಚಿಕೇರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಶಿರಸಿ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ ಹಿನ್ನೆಲೆಯಲ್ಲಿ ತಕ್ಷಣ ಶಿರಸಿ ಪಂಡಿತ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ದುರಾದೃಷ್ಟವಶಾತ್ ಆಸ್ಪತ್ರೆ ತಲುಪುವ ಮಾರ್ಗಮದ್ಯೆ ಆಕೆಯ ಪ್ರಾಣಪಕ್ಷಿ ಹಾರಿಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ
ಈ ಸಂಬಂಧ ಯಲ್ಲಾಪುರ ಠಾಣೆಗೆ ಮಾಹಿತಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Prathidvani Yellapura