

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ಸಂಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಂದ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಸೌಹಾರ್ಧತೆಯ ಸಂದೇಶ ಸಾರಲು ಮಾನವ ಸರಪಳಿ ನಿರ್ಮಿಸಲಾಗಿತ್ತು.

ನೂರಾರು ಅಂಗನವಾಡಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಗಾಂಧೀಜಿಯವರ ಹೆಸರಿನಲ್ಲಿ ಹುತಾತ್ಮರಾದ ಯೋಧರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಅನ್ನ ನೀಡಿದ ರೈತರು, ಅಕ್ಷರ ಜ್ಞಾನ ನೀಡಿದ ಶಿಕ್ಷಕರು, ದೇಶ ಕಟ್ಟುವ ಕಾರ್ಮಿಕರು ಇತ್ಯಾದಿ ಕ್ಷೇತ್ರದಲ್ಲಿ ಸೇವೆಸಲ್ಲಿಸಿ ಹುತಾತ್ಮರಾದ ಸರ್ವರಿಗು ಗೌರವ ಸಲ್ಲಿಕೆಗೆ ಮಾನವ ಸರಪಳಿ ನಿರ್ಮಿಸಿ ಸೌಹಾರ್ದ ಸಂದೇಶ ಸಾರಲಾಯಿತು.

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಹೆಗಡೆ, ಕಾರ್ಯದರ್ಶಿ ಲಕ್ಷ್ಮೀ ಆರ್ ಸಿದ್ದಿ, ಖಜಾಂಚಿ ಗೌರಿ ಮರಾಠಿ ಹಾಗು ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
