Breaking News

ಯಲ್ಲಾಪುರ ಪಟ್ಟಣ ಬೆಳೆದಿದೆ ಇನ್ನೆರಡು ಮೀನು ಮತ್ತು ಮಾಂಸ ಮಾರುಕಟ್ಟೆ ಅವಶ್ಯಕತೆ ಇದೆ – ಸತೀಶ್ ನಾಯ್ಕ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಪಟ್ಟಣ ಪ್ರದೇಶ ದಿನದಂದ ದಿನಕ್ಕೆ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿದ್ದು ಕುಟುಂಬಗಳ ಸಂಖ್ಯೆಯು ಸಹ ಹೆಚ್ಚಾಗಿದ್ದು ಅದಕ್ಕನುಗುಣವಾಗಿ ಮೀನು ಮತ್ತು ಮಾಂಸ ಮಾರುವ ಮಾರುಕಟ್ಟೆ ವ್ಯವಸ್ಥೆ ಕೂಡ ಹೆಚ್ಚಾದರೆ ಕೊಳ್ಳುವ ಗ್ರಾಹಕರಿಗು ಮಾರಾಟಮಾಡುವ ವ್ಯಾಪಾರಸ್ಥರಿಗು ಅನುಕೂಲವಾಗಲಿದೆ ಅದರಲ್ಲು ಪಟ್ಟಣ ಪಂಚಾಯತ್ ಗೆ ವರಮಾನ ಹೆಚ್ಚಾಗಲಿದ್ದು. ಪಟ್ಟಣದ ಎಲ್ಲೆಂದರಲ್ಲಿ ಮೀನು ಮಾರಾಟ ಮಾಡುವ ಸಮಸ್ಯೆಯು ಬಗೆಹರಿಯಲಿದೆ ಎಂದು ಮಂಜುನಾಥ ನಗರ ಪಟ್ಟಣ ಪಂಚಾಯತ್ ಸದಸ್ಯ ಸತೀಶ್ ಶಿವಾನಂದ ನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯಲ್ಲಾಪುರ ಪಟ್ಟಣ ಮೊದಲಿನಂತೆ ವ್ಯಾಪ್ತಿ ಸಣ್ಣದಿಲ್ಲ ಸುತ್ತಮುತ್ತಲಿನ ಪ್ರದೇಶಗಳು ಲೇಔಟ್ ಗಳಾಗಿದ್ದು ಜನಸಂಖ್ಯೆ ಹೆಚ್ಚಾಗಿದೆ ವ್ಯಾಪ್ತಿಯು ಬೆಳೆದಿದೆ.

ಹೆಬ್ಬಾರ್ ನಗರದ ಮನೆಗಳ ಒಂದು ನೋಟ

ಅಲ್ಲದೆ ನನ್ನ ವಾಡ್೯ ವ್ಯಾಪ್ತಿಯಲ್ಲಿ ಹೆಬ್ಬಾರ್ ನಗರ ನಿರ್ಮಾಣವಾಗಿದ್ದು 2 ಸಾವಿರಕ್ಕು ಅಧಿಕ ಜನರು ವಾಸಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಮೀನು ಮತ್ತು ಮಾಂಸ ಮಾರುಕಟ್ಟೆ ನಿರ್ಮಿಸಿದರೆ ವರಮಾನವು ಆದಂತಾಯ್ತು ಹಾಗೆ ಸ್ವಚ್ಚತೆ ಕಾಪಾಡಿದಂತಾಯ್ತು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಸಾಂದಾರ್ಭಿಕ ಚಿತ್ರ


      ಪಟ್ಟಣದಲ್ಲಿ ಘಟ್ಟದ ಕೆಳಗಿನ ಜನರು ಹೆಚ್ಚಾಗಿ ವಾಸಿಸುತ್ತಿದ್ದು ಎಲ್ಲರು ಮೀನನ್ನು ಹೆಚ್ಚಾಗಿ ಬಳಸುವವರಿದ್ದಾರೆ. ಘಟ್ಟದ ಕೆಳಗಿನಿಂದ ತಾಜಾ ಮತ್ತು ರಿಯಾಯಿತಿ ಬೆಲೆಯಲ್ಲಿ ಮೀನುಗಾರ ಮಹಿಳೆಯರು ಮೀನನ್ನು ವ್ಯಾಪಾರಕ್ಕೆಂದು ತಂದರೆ ಇಂತಹ ಮಾರುಕಟ್ಟೆ ವ್ಯವಸ್ಥೆ ಮಾಡುವುದರಿಂದ ಸ್ಥಳೀಯ ವ್ಯಾಪಾರಸ್ಥರಿಗು ಸಮಸ್ಯೆಯಾಗುವುದಿಲ್ಲ ಮತ್ತು ಗ್ರಾಹಕರಿಗೆ ಆಯ್ಕೆಯ ಅವಕಾಶ ಲಭಿಸಿದಂತಾಗಲಿದೆ ಮತ್ತು ಬಹಳ ಮುಖ್ಯವಾಗಿ ಎಲ್ಲೆಂದರಲ್ಲಿ ಮೀನು ಮಾಂಸ ಮಾರಾಟಕ್ಕೆ ಕಡಿವಾಣ ಬೀಳಲಿದೆ ಈ ಕುರಿತು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಗಮನ ಹರಿಸಬೇಕಿದೆ ಎಂದು ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *