
ಪ್ರತಿಧ್ವನಿ ಯಲ್ಲಾಪುರ – 2026-27 ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು ಈ ಬಾರಿ ಶೈಕ್ಷಣಿಕ ಸೇವೆಯೊಂದಿಗೆ ಸಾಮಾಜಿಕ ಕಳಕಳಿ ಉಳ್ಳ ಬಡವರ ಶಿಕ್ಷಕರೆಂದೇ ಖ್ಯಾತರಾದ ರಾಮಾಪುರ ಶಾಲೆಯ ಪದೋನ್ನತ ಮುಖ್ಯ ಶಿಕ್ಷಕ ರಾಮಚಂದ್ರ ಐ ನಾಯ್ಕ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಾಗಿ ಆನಗೋಡು ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಮಾರುತಿ ಆಚಾರಿ, ಶಿರನಾಲ ಸಹ ಶಿಕ್ಷಕ ಸತೀಶ್ ಶೆಟ್ಟಿ ಹಾಗು ಪ್ರೌಢಶಾಲಾ ವಿಭಾಗದಲ್ಲಿ ಕಿರವತ್ತಿ ಕೆಪಿಎಸ್ ಪ್ರೌಢಶಾಲೆ ಸಹ ಶಿಕ್ಷಕ ನಾಗರಾಜ್ ನಾಯ್ಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ವಿಭಾಗದಲ್ಲಿ ಮಂಗನತಾವರಗೇರಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ದೀಪಾ ಶೆಟ್ಟಿ,ಕನ್ನಡಗಲ್ ಸಹ ಶಿಕ್ಷಕಿ ಶೋಭಾ ನಾಯ್ಕ್, ಹುಟಕಮನೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸುಭ್ರಾಯ ಭಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರೌಢಶಾಲಾ ವಿಭಾಗದ ಶಿಕ್ಷಕರು ನಂದೊಳ್ಳಿ ಶಾಲೆ ಸಹ ಶಿಕ್ಷಕಿ ಅರ್ಚನ, ಯಲ್ಲಾಪುರದ ಹೊಲಿ ರೋಜರಿ ಶಾಲೆ ಸಹ ಶಿಕ್ಷಕ ವೆಂಕಟರಮಣ ಭಟ್ ಆಯ್ಕೆಯಾಗಿದ್ದು ಪ್ರಶಸ್ತಿಗೆ ಭಾಜನರಾಗಿದ್ದಾರೆ.


ದಿನಾಂಕ 5 ರಂದು ಯಲ್ಲಾಪುರದ ವೇದವ್ಯಾಸ ಕಲ್ಯಾಣ ಮಂಠಪದಲ್ಲಿ ಜರುಗುವ ಶಿಕ್ಷಕ ದಿನಾಚರಣೆ ಗುರು ಗೌರವಾರ್ಪಣ ಸಮಾರಂಭದಲ್ಲಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ವಿವಿಧ ಗಣ್ಯರು ಹಾಗು ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಜರುಗಲಿದೆ ಎಂದು ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಮಾದ್ಯಮ ಪ್ರಕಟಣೆ ಹೋರಡಿಸಿದ್ದಾರೆ.
















Prathidvani Yellapura