
ಪ್ರತಿಧ್ವನಿ ಯಲ್ಲಾಪುರ : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಯಲ್ಲಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ವೈಟಿಎಸ್ಎಸ್ ನ ಕಾಲೇಜು ಉಪನ್ಯಾಸಕಿ ಅಶ್ವಿನಿ. ಕೆ ಅವರು ಆಯ್ಕೆಯಾಗಿದ್ದು ಸೆ,5 ರಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ್ ಅದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಅಶ್ವಿನಿ.ಕೆ ಅವರು ಯಲ್ಲಾಪುರ ತಾಲೂಕಿನ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಎಂದೇ ಹೆಸರಾದ ವೈಟಿಎಸ್ಎಸ್ ಕಾಲೇಜು ಇಂಗ್ಲೀಷ್ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಈಗಾಗಲೆ ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಸಮಿತಿಯು ನೀಡುವ “ರಾಷ್ಟ್ರೀಯ ರತ್ನ” ಪ್ರಶಸ್ತಿ ಪಡೆದಿದ್ದಾರೆ. ಇತ್ತೀಚೆಗೆ ” “ಗ್ಲೋಬಲ್ ಅಮೇರಿಕನ್ ಎನ್ವಿರಾನ್ಮೆಂಟಲ್ ವಿಶ್ವ ವಿದ್ಯಾಲಯ” ದಿಂದ ಗೌರವ ಡಾಕ್ಟರೇಟ್ ಪದವಿಗೆ ನಾಮಕರಣಗೊಂಡಿರುತ್ತಾರೆ.

ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿ ಅಡಿಯಲ್ಲಿ ಶಿಕ್ಷಕ ಘಟಕದ ವತಿಯಿಂದ ನೀಡಲಾಗುವ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹೆಸರಿನ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತಾರಾಮ್ ಸಿದ್ದಿ, ಸಂಕಲ್ಪ ಸಂಸ್ಥೆ ಪ್ರಮೋದ್ ಹೆಗಡೆ, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ಸಾಮಾಜಿಕ ಕಾರ್ಯಕರ್ತ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಸಹ ಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಸಂಸ್ಥೆ ಅಧ್ಯಕ್ಷ ರವಿ ಕುಮಾರ್ ಲಕ್ಷ್ಮಣ ಶಾನಬಾಗ್, ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಬಲವಂತ ಭಟ್ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಪ್ರಾಂಶುಪಾಲರು, ಭೋದಕ,ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗು ಕುಟುಂಬದವರು ಹಿತೈಷಿಗಳು ಊರ ನಾಗರಿಕರು ಶುಭ ಹಾರೈಸಿದ್ದಾರೆ.















Prathidvani Yellapura