Breaking News

ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತೆ ಇತ್ತು ಆಹ್ವಾನಕ್ಕೆ ಸಕಲ ಸಿದ್ದತೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ- ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮ ಜರುಗುತ್ತಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ತಾಲೂಕಿನಾದ್ಯಂತ ಮತ್ತು ಪಟ್ಟಣದಲ್ಲಿ ಜ,5 ಶುಕ್ರವಾರದಿಂದ ಅಂದರೆ ಇಂದಿನಿಂದ ಹಿಂದುಗಳ ಪ್ರತಿ ಮನೆಗೆ ಆಯಾ ಭಾಗದ ಪ್ರಮುಖರು ಸ್ವಯಂ ಸೇವಕರು ತೆರಳಿ ಅಕ್ಷತೆ ಇತ್ತು ಆಹ್ವಾನ ಪತ್ರಿಕೆ ನೀಡಿ ಕೇಸರಿ ಧ್ವಜ ನೀಡಿ ಗೌರವದ ಕರೆ ನೀಡುವ ಪರಮ ಪವಿತ್ರ ಕಾರ್ಯವನ್ನು ಈ ನೆಲದ ಶಕ್ತಿ ಮಾತೆ ಗ್ರಾಮದೇವಿ ಸಾನಿದ್ಯದಲ್ಲಿ ಪೂಜೆಯೊಂದಿಗೆ ಶುಭಾರಂಭಿಸಲಾಗುತ್ತಿದೆ. ಯಾವ ಮನೆಯನ್ನು ಬಿಡದೆ ಅಕ್ಷತೆ ತಲುಪಿಸಿ ಆಹ್ವಾನಿಸುವ ಸಂಕಲ್ಪ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ನಾರಾಯಣ ನಾಯ್ಕ ಪ್ರತಿಕ್ರಿಯಿಸಿದ್ದಾರೆ.


ಅವರು ಪಟ್ಟಣದ ತಿಲಕ್ ಚೌಕ್ ನಲ್ಲಿ ಗ್ರಾಮದೇವಿ ವಾಡ್೯ ವ್ಯಾಪ್ತಿಯ ಅಕ್ಷತಾ ಅಭಿಯಾನದ ಕುರಿತು ಮಾಹಿತಿ ನೀಡುವ ಸಭೆ ನಡೆಸಿ ಅಕ್ಷತೆ,ಆಹ್ವಾನ ಪತ್ರಿಕೆ ಪ್ರಮುಖರಿಗೆ ಹಸ್ತಾಂತರಿಸಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.


ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸಲುವಾಗಿ ದೇಶಾದ್ಯಂತ ಹಣ ಸಂಗ್ರಹಿಸಿ ನೀಡಲಾಗಿದೆ. ಅದರಂತೆ ಈ ನೆಲದ ಪ್ರತಿ ಹಿಂದುಗಳ ಮನೆಗೆ ತೆರಳಿ ಅಕ್ಷತೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿ ಲೋಕಾರ್ಪಣೆ ದಿನವನ್ನು ಅವಿಸ್ಮರಣಿಯವಾಗಿಸಬೇಕಿದೆ ಎಂದು ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ಹೇಳಿದರು


ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಯಾವುದೆ ಒಂದು ದೇವಸ್ಥಾನ ಗಳು ಬಿಡದಂತೆ ವಿಶೇಷ ಪೂಜೆ ಭಜನೆ ಆಯೋಜಿಸಿ ರಾಮ ಮಂದಿರ ಲೋಕಾರ್ಪಣೆ ದಿನವನ್ನು ಸಾರ್ಥಕವಾಗಿಸಬೇಕಿದೆ ಎಂದು ಶಕ್ತಿ ಗಣಪತಿ ದೇವಸ್ಥಾನ ಪ್ರಮುಖ ಅನಂತ ಗಾಂವ್ಕರ್ ಹೇಳಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಶಿರೀಷ್ ಪ್ರಭು, ಶ್ಯಾಮಿಲಿ ಪಾಟಣ್ಕರ್, ಆದಿತ್ಯ ಗುಡಿಗಾರ್, ನಮಿತಾ ಬಿಡೀಕರ್, ಪ್ರದೀಪ್ ಯಲ್ಲಾಪುರಕರ, ರಾಜೇಶ್, ಸಿದ್ದಾರ್ಥ ಶಂಕರ ಬದ್ದಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿ ಆ ದಿನವನ್ನು ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತೆ ಧಾರ್ಮಿಕ ಆಚರಣೆಯೊಂದಿಗೆ ಸಂಭ್ರಮಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಮಾಡಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *