
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ನವರಾತ್ರಿ ನಿಮಿತ್ತ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ.

ಎರಡನೇ ದಿನವಾದ ಶುಕ್ರವಾರ ದೇವಿಯ ಸನ್ನಿಧಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಸಹಸಾರು ಭಕ್ತರು ದೇವಿಗೆ ಉಡಿತುಂಬಿ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಪ್ರತಿ ವರ್ಷದಂತೆ ಈ ವರ್ಷವೂ ಸಾಮಾಜಿಕ ಕಾರ್ಯಕರ್ತ ಯುವಮುಖಂಡ ಸಂತೋಷ ನಾಯ್ಕ ಸಾರಥ್ಯದಲ್ಲಿ ಅನ್ನ ಪ್ರಸಾದ ಸೇವೆ ನಡೆಯಿತು.





ಭಗತ್ ಸಿಂಗ್ ಆಟೋ ಚಾಲಕ-ಮಾಲಕರ ಸಂಘ, ಗ್ರಾಮದೇವಿ ಟ್ಯಾಕ್ಸಿ ಚಾಲಕ-ಮಾಲಕರ ಸಂಘ, ಲಾರಿ ಚಾಲಕ-ಮಾಲಕರ ಸಂಘ, ಬಸವೇಶ್ವರ ಗೂಡ್ಸ್ ರಿಕ್ಷಾ ಚಾಲಕ-ಮಾಲಕರ ಸಂಘ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಪ್ರಮು ದಾನಿಗಳ ಸಹಕಾರದಿಂದ ಅನ್ನಸಂತರ್ಪಣಾ ಕಾರ್ಯಕ್ರಮ ಆಯೋಜನೆಗೊಂಡಿದ್ದು ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
Prathidvani Yellapura