
ಕೇಬಲ್ ನಾಗೇಶ್, ಯಲ್ಲಾಪುರ🖋
ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಚಂದಗುಳಿಯ ಶ್ರೀ ಸಿದ್ಧಿವಿನಾಯಕ ದೇವಾಲಯದ ವತಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಧಾರ್ಮಿಕ ಸೇವೆಗೆ “ಗೌರವಾರ್ಪಣೆ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಸೇರಿದಂತೆ ಗಣ್ಯರೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಲ್ಲಿಸಲಾದ ಗೌರವವನ್ನು ಅವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕರ ಧರ್ಮಪತ್ನಿ ವನಜಾಕ್ಷಿ ಶಿವರಾಮ ಹೆಬ್ಬಾರ್ ಸೇರಿದಂತೆ, ಚಂದಗುಳಿ ಸಿದ್ಧಿವಿನಾಯಕ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





Prathidvani Yellapura