

ಪ್ರತಿಧ್ವನಿ,ಯಲ್ಲಾಪುರ : ವರ್ಷದ ನಂತರ ಮತ್ತೆ ಓರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದ್ದು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಭದ್ರತೆ ಕಲ್ಪಿಸುವ ಸಲುವಾಗಿ ದೇಶದ ವಿವಿದ ರಾಜ್ಯಗಳಿಂದ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು ರಾಜಸ್ಥಾನದಿಂದ ಬಂದ 34 ವರ್ಷ ಪ್ರಾಯದ ಯುವಕನೋರ್ವನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ.

ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದು ಚಿಕಿತ್ಸೆ ಪಡೆದು ಹೋಗಿದ್ದರೂ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮರಳಿ ಆಸ್ಪತ್ರೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ವೈದ್ಯರು ಗಂಟಲುದ್ರವ ಪರೀಕ್ಷಿಸಿದಾಗ ಕೊರೊನಾ ಸೋಂಕಿರುವುದು ದೃಡಪಟ್ಟಿದೆ.

ತಕ್ಷಣ ಅಲರ್ಟ್ ಆದ ಆರೋಗ್ಯ ಸಿಬ್ಬಂದಿಗಳು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಚುನಾವಣಾ ಕರ್ತವ್ಯಕ್ಕೆ ಬಂದಿರುವ ೭೦ಕ್ಕೂ ಅಧಿಕ ಯೋಧರನ್ನು ಪರೀಕ್ಷೆಗೆ ಒಳಪಡಿಸಿದ್ದು ಫಲಿತಾಂಶ ಬರಬೇಕಿದೆ.
Prathidvani Yellapura