Breaking News

ಅನುದಾನಿತ- ಸರ್ಕಾರಿ ಶಾಲಾ ಶಿಕ್ಷಕರೆಂಬ ತಾರತಮ್ಯ ಬಿಡಿ ಸರಿ ಸಮಾನವಾದ ಗೌರವ ಹಕ್ಕುಗಳನ್ನು ಕೊಡಿ – ಎಂ. ರಾಜಶೇಖರ್ ಮನವಿ

ಪ್ರತಿಧ್ವನಿ ಯಲ್ಲಾಪುರ : 30 ವರ್ಷಕ್ಕೂ ಹೆಚ್ಚಿನ ಅವಧಿಗಳ  ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿ ಬರಿಗೈಯಲ್ಲಿ ಮನೆಗೆ ಹೋಗುವ ಅನುದಾನಿತ ಶಾಲಾ ಶಿಕ್ಷಕರ ಪಾಡು ಯಾರಿಗೂ ಬರಬಾರದು. ಈ ರೀತಿಯ ಮಲತಾಯಿ ಧೋರಣೆಯಿಂದ ಅನೇಕ ಶಿಕ್ಷಕರು ಇಂದು ಭ್ರಮನೀರಸನಗೊಂಡಿದ್ದಾರೆ.  ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ  ಸೂಚಿಸಿದಂತೆ ಓಪಿಎಸ್ ಜಾರಿಗೊಳಿಸಿ. ಬಸವರಾಜ ಹೊರಟ್ಟಿ ಅವರ ಕಾಲ್ಪನಿಕ ವೇತನದ ಮೇಲಿನ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ(ಸಿರಿ) ಹಾಗೂ ಇನ್ನಿತರ ಆದೇಶಗಳನ್ನು ಯಥಾವತ್ತಾಗಿ ತಾರತಮ್ಯವಿಲ್ಲದೆ ಜಾರಿಗೊಳಿಸಬೇಕಿದೆ. ಅನುದಾನಿತ ಮತ್ತು ಸರಕಾರಿ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದಂತೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಿ. ಮಲೆನಾಡಿನ ಪ್ರದೇಶಗಳ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಅನುಪಾತವನ್ನು ಕಡಿಮೆಗೊಳಿಸಿ ಆದೇಶ ನೀಡಬೇಕಿದೆ ಎಂದು ಮಾಧ್ಯಮಿಕ ನೌಕರ ಸಂಘದ ಕೇಂದ್ರ ಸಮಿತಿಯ ಸದಸ್ಯ ಹಾಗು ಹೋಲಿ ರೋಜರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎಂ ರಾಜಶೇಖರ ಹೇಳಿದರು.

    ಅವರು ಹಲವಾರು ಜ್ವಲಂತ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ದಂಡಾಧಿಕಾರಿಗಳ ಮೂಲಕ ಶನಿವಾರ ಮಾಧ್ಯಮಿಕ ನೌಕರರ ಸಂಘ ಯಲ್ಲಾಪುರ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.ಮನವಿ ಸ್ವೀಕರಿಸಿದ ತಾಲೂಕಿನ ದಂಡಾಧಿಕಾರಿಗಳು ಮನವಿಯನ್ನ ಸರ್ಕಾರಕ್ಕೆ ಕಳಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಿಕ ನೌಕರರ ಸಂಘದ ಕೇಂದ್ರ ಸಮಿತಿಯ  ಅಧ್ಯಕ್ಷರಾದ ವಿನಾಯಕ ಹೆಗಡೆ ಕಾರ್ಯದರ್ಶಿಗಳಾದ ಶರಣಬಸವ ಬೇವಿನಕಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ತಾಲೂಕಿನ ಎಲ್ಲಾ ಅನುದಾನಿತ ಶಾಲೆಗಳ ಶಿಕ್ಷಕ ಬಂಧುಗಳು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದಡಿ ಉಚಿತ ಟೈಲರಿಂಗ್ ತರಬೇತಿಗೆ ಚಾಲನೆ.

ಪ್ರತಿಧ್ವನಿ ಯಲ್ಲಾಪುರ : “ಟೈಲರಿಂಗ್ ಕೇವಲ ಒಂದು ಕೌಶಲವಲ್ಲ, ಅದು ಮಹಿಳೆಯರ ಜೀವನಕ್ಕೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು …

Leave a Reply

Your email address will not be published. Required fields are marked *