
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಹೊರ ವಲಯ ಸವಣಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದ ಸ್ವಚ್ಚತಾ ಕಾರ್ಯ ಸ್ಥಳೀಯ ನಾಗರಿಕರು ಸೇರಿದಂತೆ ಹಳೆಯ ವಿದ್ಯಾರ್ಥಿಗಳು, ಪ್ರಮುಖರೊಂದಿಗೆ ರವಿವಾರ ನೆರವೇರಿತು.




ಶಾಲೆಯ ಆವರಣದಲ್ಲಿ ಬೆಳೆದ ಅನವಶ್ಯಕ ಗಿಡಗಂಟಿಗಳನ್ನು ತೆಗೆದು ಸ್ವಚ್ಚಗೊಳಿಸಲಾಯಿತು.

ಶಾಲೆಯ ಸ್ವಚ್ಚತಾ ಕಾರ್ಯದ ಶ್ರಮದಾನದಲ್ಲಿ ಪಾಲ್ಗೊಂಡ ರವಿ ನಾಯ್ಕ, ಮಂಜುನಾಥ ನಾಯ್ಕ,ಜಾಬೀರ್ ಶೇಖ್, ತಿಮ್ಮಣ್ಣ,ರಾಘವೇಂದ್ರ ಹೆಗಡೆ, ಉಮಾಮಹೇಶ್ವರಭಟ್ಟ , ವಿಶ್ವನಾಥ ಭಟ್ಟ, ಯುವರಾಜ ಗೊಂದಳಿ, ಶಶಿಧರ್ ಗೊಂದಳಿ, ವಿಜಯಾ ಬಾಂದೇಕರ್,ಪ್ರೇಮಾನಂದ ಗೊಂದಳಿ, ಮಾಜಿ ವಿದ್ಯಾರ್ಥಿನಿ ಪವಿತ್ರಾ ಪಡ್ತಿ,ಧನುಷ್ ಗೊಂದಳಿ,ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ ಶೇಖ್,ಉಜ್ಮಾ, ಜಯಂತ, ನೈಜಾನ್, ರಿಹಾನ್, ಮುಫಿದ್ , ಪ್ರಿಯಾ ಇವರೆಲ್ಲರಿಗೂ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಹೊಸ್ಕೇರಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.









Prathidvani Yellapura