
ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲ್ಲೂಕಿನ ಹಿಟ್ಟಿಬೈಲ್ ಸಮೀಪ ಭಾನುವಾರ ಮಳೆಯ ನಡುವೆಯೇ ಬಸ್, ಕಾರು ಹಾಗೂ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,ಯಲ್ಲಾಪುರ ತಾಲ್ಲೂಕು ಆಸ್ಪತ್ರೆ ಆಂಬುಲೆನ್ಸ್ ಮೂಲಕ ಮೃತರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಆಗಮಿಸಿದ್ದು ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಾಗು ಮೃತ ಯುವಕರ ಬಗ್ಗೆ ಇನ್ನಷ್ಟೆ ತಿಳಿಯಬೇಕಿದೆ.
Prathidvani Yellapura