Breaking News

ಮಂಚಿಕೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ- ಅಹವಾಲು ಸ್ವೀಕರಿಸಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನೂತನ ಯೋಜನೆಯಾದ ” ಪ್ರಜಾಸೇವೆ ”  ಆಂದೋಲನ ಸಭೆ ತಾಲ್ಲೂಕಿನ ಮಂಚಿಕೇರಿಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜನತೆ ಮತ್ತು ಸರ್ಕಾರ ಪರಸ್ಪರರಾಗುವ ನಿಟ್ಟಿನಲ್ಲಿ ಪ್ರಜಾಸೇವೆ ಅತ್ಯಂತ ಪರಿಣಾಮಕಾರಿಯಾಗಲಿದೆ ಮತ್ತು ಆಡಳಿತ ಯಂತ್ರ ಮತ್ತಷ್ಟು ಚುರುಕಾಗಲಿದೆ. ಪ್ರಜೆಗಳ ಸೇವೆಗಾಗಿಯೆ ಆಯ್ಕೆಯಾದ ನಾವು ಪ್ರಜೆಗಳ ಸೇವೆ ಇನ್ನಷ್ಟು ಚುರುಕಾಗಿ ಮಾಡಲು ಅವಕಾಶವಾಗಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಸಭೆಯನ್ನು ಉದ್ದೇಶಿಸಿ ಹೇಳಿದರು.

ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ವಿಧವ ವೇತನ,ಅಂಗವಿಕಲ ವೃಧ್ದಾಪ್ಯ ವೇತನ, ಕುಡಿಯುವ ನೀರು,ರಸ್ತೆ, ಮನೆ,ಕಾಲು ಸಂಕ ಸೇರಿದಂತೆ ಹತ್ತು ಹಲವು ವಿಚಾರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲೆ ಬಗೆಹರಿಸಿದರು ಮತ್ತು ಕೆಲವನ್ನು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಬಗೆಹರಿಸುವಂತೆ ಆದೇಶಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಎಂ.ಆರ್.ಕುಲಕರ್ಣಿ, ತಾಲೂಕು ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜೇಶ್ ಧನವಾಡಕರ್, ಎಸಿಎಫ್ ಗಳಾದ ವೀರೇಶ್ ಕಬ್ಬಿನ್,ಸಂಗಮೇಶ್, ಪಿ.ಐ.ಸುರೇಶ್ ಕುಂಬಾರ್, ಪಂಚ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಉಲ್ಲಾಸ್ ಶಾನಭಾಗ್, ಹಾಗು ಇತರೆ ಅಧಿಕಾರಿಗಳು, ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು. 

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *