Breaking News

ಇಡಗುಂದಿ ವಲಯ ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ – ನಟೋರಿಯಸ್ ಕಾಡುಗಳ್ಳ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ ಬಂಧನ ; 2.5 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ.!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ತಾಲೂಕಿನ ಅರಬೈಲು ಅರಣ್ಯಪ್ರದೇಶ ವ್ಯಾಪ್ತಿಯಲ್ಲಿ 2.5 ಲಕ್ಷ ಮೌಲ್ಯದ ನಾಲ್ಕು ಸಾಗುವಾನಿ ಹಾಗೂ ಒಂದು ಸೀಸಂ ಜಾತಿಯ ಮರಗಳನ್ನು ಕತ್ತರಿಸಿ ತುಂಡುಗಳನ್ನಾಗಿ ತಯಾರಿಸಿ ಅಕ್ರಮವಾಗಿ ಸಾಗಿಸಲು ಸಜ್ಜಾದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಇಡಗುಂದಿ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಸಂದೀಪ ಸದಾನಂದ ನಾಯ್ಕ, ಸುರೇಶ ತುಳಸು ಗೌಡ ಎಂಬುವರೇ ಬಂಧಿತ ಆರೋಪಿಗಳಾಗಿದ್ದು 2.161 ಕ್ಯೂಬಿಕ್ ಮೀಟರಿನಷ್ಟು ಮರದ ತುಂಡುಗಳನ್ನು ಕದ್ದು ಸಾಗಿಸಲು ಸಿದ್ಧತೆ ನಡೆಸಿದ್ದರು. ವಿಷಯ ತಿಳಿದ ಅರಣ್ಯಾಧಿಕಾರಿಗಳು ಧಾಳಿ ನಡೆಸಿ ಮಾಲು ಸಹಿತ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇವರಲ್ಲಿ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ ಹಿಲ್ಲೂರು ಎಂಬಾತ ನಟೋರಿಯಸ್ ಕಾಡುಗಳ್ಳನಾಗಿದ್ದು ಅರಣ್ಯ ಇಲಾಖೆಯ ಬೇರೆ ಬೇರೆ ವಿಭಾಗಗಳಲ್ಲಿ ಹಲವು ಎಫ್.ಐ.ಆರ್‌ ಗಳು ಈತನ ಮೇಲೆ ದಾಖಲಾಗಿವೆ. ಅಕ್ರಮವಾಗಿ ಅರಣ್ಯದೊಳಗೆ ನುಸುಳಿ, ಮರಗಳನ್ನು ಕಡಿದು ತುಂಡುಗಳಾಗಿ ತಯಾರಿಸಿ ಸಾಗಿಸುತ್ತಿದ್ದ. ಅಲ್ಲದೇ ವಿವಿಧ ರೀತಿಯ ಅರಣ್ಯ ಅಕ್ರಮಗಳನ್ನು ನಡೆಸಿ ತಲೆ ಮರೆಸಿಕೊಂಡು ಇಲಾಖೆಗೆ ಸಿಗದೇ ತಲೆನೋವಾಗಿದ್ದ.
ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಬಾನು ಹಾಗೂ ಮಂಚೀಕೇರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ ಪ್ರಭಾಕರ ಮಾರ್ಗದರ್ಶನದಲ್ಲಿ ಇಡಗುಂದಿ ವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ ನಾಯಕ್, ಸೋಮೇಶ್ವರ ನಾಯಕ್, ಉಪ ವಲಯ ಅರಣ್ಯಾಧಿಕಾರಿಗಳಾದ ಸಂತೋಷ ಕುಮಾರ, ಚಂದ್ರಹಾಸ ಪಟಗಾರ , ಗಸ್ತು ಅರಣ್ಯ ಪಾಲಕರಾದ ಕಾಶೀನಾಥ ಯಕಂಚಿ ಹಾಗೂ ರಾಮನಗುಳಿ , ಹೊಸಕಂಬಿ, ಅಂಕೋಲಾ ವಲಯದ ವಲಯ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *