Breaking News

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ಡಕಾಯಿತಿ ಮಾಡಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ವರ್ಷದ ನಂತರ ಪ್ರಕರಣದ ಆರೋಪಿಗಳನ್ನು ಕಂಬಿ ಹಿಂದೆ ಕಳಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ವರ್ಷ 23-5-2024 ರಂದು ಮುಂಬಯಿ ನಿಂದ ಮಂಗಳೂರಿಗೆ ರಾಜಸ್ಥಾನ ಮೂಲದ ಸುರೇಶ್ ರಾವ್ ಮತ್ತು ಸಂಪತ್ ಸೋಲಂಕಿ ಎಂಬುವರು ತೆರಳುವ ವೇಳೆ ಅರಬೈಲ್ ಘಟ್ಟದಲ್ಲಿ ಅಡ್ಡಗಟ್ಟಿದ ಡರೋಡೆಕೋರರ ತಂಡ ಕಾರಿನಲಿದ್ದವರನ್ನು ಹೆದರಿಸಿ ಬೆದರಿಸಿ ಹೊಡೆದು ಅವರ ಬಳಿಯಲಿದ್ದ ಮೊಬೈಲ್ ಫೋನ್ ಮತ್ತು ನಗದನ್ನು ಕಸಿದು ಕಾರ್ ಕೀ ಸಹಿತ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ನಡಯರಸ್ತೆಯಲ್ಲಿ ಇಳಿಸಿ ಪರಾರಿಯಾಗಿರುತ್ತಾರೆ.


ಪ್ರಕರಣ ದಾಖಲಿಸಿಕೊಂಡ ಯಲ್ಲಾಪುರ ಪೊಲೀಸರು ತನಿಖೆಯ ಪ್ರಾರಂಭದಲ್ಲಿ ಐವರನ್ನು ಬಂಧಿಸಲಾಗಿತ್ತು.


ಪ್ರಕರಣವನ್ನು ಅಲ್ಲಿಗೆ ಬಿಡದೆ ಮತ್ತೆ ಬೆನ್ನು ಹತ್ತಿದ್ದ ಯಲ್ಲಾಪುರ ಪೊಲೀಸರ ಶ್ರಮ ವರ್ಷದ ನಂತರ ಸಾರ್ಥಕವಾಗಿ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಖಂಡಾಲದ ಅಬ್ದುಲ್ ಮೆಹಬೂಬ್ ಶೇಖ್ ಮತ್ತು ಮಹಾರಾಷ್ಟ್ರದ ನಿವಾಸಿ ಸಂಕೇತ ಸುನಿಲ ತುಳಸನಕರ ಎಂಬ ಇಬ್ಬರು ಡಕಾಯಿತರನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಬಳಸಿದ ವಾಹನಗಳನ್ನು ಮತ್ತು ಸ್ವತ್ತನ್ನು ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಎಂ ನಾರಾಯಣ್ ಆಧಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಲ್ಲಾಪುರ ಪೊಲೀಸರ ಶ್ರಮದಲ್ಲಿ ಯಶಸ್ವಿಯಾಗಿದ್ದು ಸರ್ವರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಕಿರವತ್ತಿ ದೊಡ್ಲ ಡೈರಿ ಯಲ್ಲಿ‌” ವಿಶ್ವ ಪರಿಸರ ದಿನ ” ಆಚರಿಸಲಾಯಿತು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ಇರುವ ದೊಡ್ಲ …

Leave a Reply

Your email address will not be published. Required fields are marked *