Breaking News

ಲಯನ್ಸ್ ಕ್ಲಬ್ ಯಲ್ಲಾಪುರದ ಪರಿಸರ ಕಾಳಜಿ ವನಮಹೋತ್ಸವ ಆಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಎಂದು ಬಾವಿಸದೆ ಪ್ರತಿ ನಾಗರಿಕನ ಜವಾಬ್ದಾರಿ ಮತ್ತು ಕರ್ತವ್ಯ ಎಂಬ ಪ್ರಜ್ಞೆ ಮೂಡಬೇಕಿದೆ. ನಮ್ಮ ಕೈಲಾದ ಮಟ್ಟಿಗೆ ಭೂಮಿಯ ಋಣವನ್ನು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಿಸುವ ಮೂಲಕ ತೀರಿಸಬೇಕಿದೆ ಎಂದು ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷ ಸರೇಶ್ ಬೋರ್ಕರ್ ಹೇಳಿದರು.


ಅವರು ಪಟ್ಟಣದ ಕಾಳಮ್ಮ ನಗರದ ಸರ್ಕಾರಿ ಶಾಲೆಯ ಆವಾರದಲ್ಲಿ ವನಮಹೋತ್ಸವ ಆಚರಿಸಿ ಗಿಡಗಳನ್ನು ವಿತರಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಶಿಕ್ಷಣ ಇಲಾಖೆ ಅಧಿಕಾರಿ ಷಣ್ಮುಖ ಹೆಗಡೆ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸುರೇಶ್ ಮಡಿವಾಳ, ಮುಖ್ಯ ಅಧ್ಯಾಪಕಿ ಸುನಂದ ಪಾಟಣ್ಕರ್ ಇತರೆ ಶಿಕ್ಷಕ ವೃಂದ ಹಾಗು ಲಯನ್ಸ್ ಕ್ಲಬ್ ಪ್ರಮುಖರಾದ ನಂದನ್ ಬಾಳಗಿ, ಶಾಂತಾರಾಮ ಹೆಗಡೆ, ಮಹೇಶ್ ಗೌಳಿ, ಎಸ್.ಎನ್.ನಾಯಕ, ಎನ್‌ಎ.ಭಟ್ , ಶೇಷಗಿರಿ ಪ್ರಭು, ಕಿರಣ್ ಶೆಟ್ಟಿ, ಮೋಹನ ನಾಯಕ್, ಇನ್ನಿತರ ಪ್ರಮುಖರು ಭಾಗಿಯಾಗಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *