Breaking News

ಗ್ರಾಮಸ್ಥರಿಂದಲೆ ಶ್ರಮಾದಾನ ನಡೆದಾಡುವ ರಸ್ತೆ ಸರಿಪಡಿಸಿಕೊಂಡ ನಾಗರಿಕರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ತಾಲೂಕಿನ ರಾಮಾಪುರ ಮತ್ತು ಕಾಜಲವಾಡಾ ಗ್ರಾಮಕ್ಕೆ ಸಂಚರಿಸುವ ರಸ್ತೆ ಹೊಂಡಗುಂಡಿಗಳಿಂದ ತುಂಬಿಹೋಗಿತ್ತು ಇದನ್ನು ಗ್ರಾಮಸ್ಥರು ಶ್ರಮದಾನದ ಮೂಲಕ ತಮ್ಮ ಗ್ರಾಮದ ರಸ್ತೆ ತಾವೆ ದುರಸ್ತಿ ಮಾಡಿಕೊಂಡಿದ್ದಾರೆ.


ಮಳೆಯಿಂದ ಹಾಳಾದ ರಸ್ತೆಯಲ್ಲಿ ಗ್ರಾಮದ ಶಾಲಾ ಮಕ್ಕಳು ವೃದ್ದರ ಒಡಾಟ್ಟಕ್ಕೆ ತೊಂದರೆ ಯಾಗುತ್ತಿದ್ದ ಕಾರಣ ಯುವಕರು ಗ್ರಸಮದ ಹಿರಿಯರು ಕೆಲಸ ಮಾಡಿದರು. ಸ್ಥಳಕ್ಕೆ ಅಗಮಿಸಿದ ಯಲ್ಲಾಪುರ ಪಟ್ಟಣ ಪಂಚಾಯತ ಸದಸ್ಯೆ ಕಲ್ಪನಾ ಗಜಾನನ ನಾಯ್ಕ ಎರಡು ಚಿಲ ಸಿಮೆಂಟ್ ದೆಣಿಗೆ ನಿಡಿದರು.


ಪ್ರಕಾಶ ದೇವಕರ, ಸಂತೋಷ ಮರಾಠಿ , ಸುಬ್ರಹ್ಮಣ್ಯ ಪಂಢರಪುರ, ಅಪ್ಪಣ್ಣ ಮರಾಠಿ, ಬಾಲು, ಪಂಡರಪುರ ವಿಶ್ವಾ ದೆಸಾಯಿ ಚಂದ್ರಕಾಂತ, ಅಣ್ಣಪ್ಪಾ ಪಾಟಿಲ ನಾಗರಾಜ ಗುಣವಂತ ನಾಯ್ಕ ಮೊದಲಾದವರು ಶ್ರಮದಾನದಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *