
ಯಲ್ಲಾಪುರ : ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಶಿರಸಿಯಲ್ಲಿ ನಡೆದ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಬಾಲಕಿಯರ ವಿಭಾಗದಲ್ಲಿ ಕೃಷ್ಣವೇಣಿ ನಾಯ್ಕ 2೦೦ ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಈ ವಿದ್ಯಾರ್ಥಿಗೆ ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಶಾನಭಾಗ, ಕಾರ್ಯದರ್ಶಿಗಳಾದ ರಾಜೇಂದ್ರಪ್ರಸಾದ ಬಿ ಭಟ್ಟ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , ಪ್ರಾಂಶುಪಾಲರಾದ ಶ್ರೀ.ಆನಂದ ಹೆಗಡೆ, ಮುಖ್ಯೋಪಾಧ್ಯಾಯರಾದ ಶ್ರೀಮತಿ. ಶೈಲಜಾ ಮಾಪ್ಸೇಕರ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳೂ ಅಭಿನಂದಿಸಿದ್ದಾರೆ.