
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ವೈ. ಟಿ. ಎಸ್. ಎಸ್. ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಮಾನ್ಯಶ್ರೀ ಹೆಗಡೆ ಕನ್ನಡ ಬಾಷಣ ಪ್ರಥಮ, ರಿಹಾನ್ ಖಲಂದರ್ ಮತ್ತು ಫಯಾಝ್ ಖಲಂದರ್ ಅರೆಬಿಕ್ ಧಾರ್ಮಿಕ ಪಠಣದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ, ಧನುಶ್ ಹೆಗಡೆ ಮಿಮಿಕ್ರಿಯಲ್ಲಿ ಪ್ರಥಮ, ಅದಿತಿ ಹೆಗಡೆ ಛದ್ಮವೇಷದಲ್ಲಿ ದ್ವಿತೀಯ ಸ್ಥಾನ ಮತ್ತು ನೀರಜಾ ನಾಯಕ ಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ವನ್ನು ಪಡೆದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಶಾನಭಾಗ, ಕಾರ್ಯದರ್ಶಿಗಳಾದ ರಾಜೇಂದ್ರಪ್ರಸಾದ ಬಿ ಭಟ್ಟ ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , ಪ್ರಾಂಶುಪಾಲರಾದ ಶ್ರೀ.ಆನಂದ ಹೆಗಡೆ, ಮುಖ್ಯೋಪಾಧ್ಯಾಯರಾದ ಶ್ರೀಮತಿ. ಶೈಲಜಾ ಮಾಪ್ಸೇಕರ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳೂ ಅಭಿನಂದಿಸಿದ್ದಾರೆ.