Breaking News

ಸಮಾಜ ಸೇವಕ ಮಾಧವ‌ ನಾಯಕರಿಂದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಭೇಟಿ

ಪ್ರತಿಧ್ವನಿ ಯಲ್ಲಾಪುರ (ಬೆಂಗಳೂರು): ಜನಶಕ್ತಿ ವೇದಿಕೆಯ ಅಧ್ಯಕ್ಷ ಅಜ ಸೇವಕ ಮಾಧವ ನಾಯಕ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ನಿವಾಸದಲ್ಲಿ ಅವರನ್ನು ಭೇಟಿಯಾದಾಗ, ನ್ಯಾ. ಹೆಗ್ಡೆಯವರು ತಮ್ಮ ಕುಟುಂಬದ ಘಟನೆಯೊಂದನ್ನು ನೆನೆದು ಭಾವುಕರಾದರು. “ನನಗೆ ಈಗ 86 ವರ್ಷ ವಯಸ್ಸಾಯಿತು. ನನ್ನ ಅಣ್ಣ ಕಳೆದ ಜನವರಿ 2ರಂದು ಆಕಸ್ಮಿಕವಾಗಿ ಬಿದ್ದು ಮೃತಪಟ್ಟರು,” ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು.

ಇದೇ ವೇಳೆ ಮಾಧವ ನಾಯಕ ಅವರು ಕಾರವಾರ ಭಾಗದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಹೆಗ್ಡೆ ಅವರ ಗಮನ ಸೆಳೆದರು. ವಿಶೇಷವಾಗಿ ಕಾರವಾರದ ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಮೂಲಸೌಕರ್ಯಗಳ ಕೊರತೆ ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ ಕುರಿತು ಚರ್ಚಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಖರ್ಗೆ ಕೋಮು ಪ್ರಚೋದನೆ ಭಾಷಣಕ್ಕೆ ಬಿಜೆಪಿ ಕೆಂಡಾಮಂಡಲ   ಎಫ್ ಐ ಆರ್ ದಾಖಲಿಸಲು ಆಗ್ರಹ.

ಪ್ರತಿಧ್ವನಿ ಯಲ್ಲಾಪುರ : ಇತ್ತೀಚಿನ ಕೆಲ ದಿ‌ಗಳ ಹಿಂದೆ ಅಸ್ಸಾಂ ಚುನಾವಣ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಯವರು ಕೋಮು …

Leave a Reply

Your email address will not be published. Required fields are marked *