
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸರ್ಕಾರದ ಅಡಿಯಲ್ಲಿ ಮಂಜೂರಾಗುವ ಸವಲತ್ತಿನೊಂದಿಗೆ ಹಲವು ಖಾಸಗಿ ಕಂಪನಿಗಳ ಸಿಎಸ್ಆರ್ ಫಂಡ್ ಸಹಕಾರದೊಂದಿಗೆ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳನ್ನು ಪೂರೈಸಲಾಗುತ್ತಿದೆ.ಒದಗಿಸಿದ ಕೊಠಡಿಗಳಾಗಲಿ ಇನ್ನಿತರ ಸವಲತ್ತುಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಉತ್ತಮವಾಗಿ ನಿರ್ವಹಣೆ ಮಾಡಬೇಕಿದೆ ಎಂದು ಯಲ್ಲಾಪುರ ಮುಂಡಗೋಡು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ರವಿವಾರ ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಸಂಪೆಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವೇಕ ಯೋಜನೆ ಅಡಿಯಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ ಹೇಳಿದರು

ಈ ಸಂದರ್ಭದಲ್ಲಿ ಶಿಕ್ಷಕರು,ಎಸ್.ಡಿ.ಎಮ್.ಸಿ ಸಮಿತಿಯ ಪದಾಧಿಕಾರಿಗಳು ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.




Prathidvani Yellapura