



ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಏಪ್ರಿಲ್ 2024 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿ ಈರಾಪುರದ ಗೌತಮಿ ಕೋಮಾರ 88.16 % ಗಳಿಸಿದ್ದು ಅಂಕಗಳು ಕಡಿಮೆ ಬಂದ ಕಾರಣ ಮರು ಮೌಲ್ಯಮಾಪನಕ್ಕೆ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದಳು. ಇದೀಗ ಮರು ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡು ಹೆಚ್ಚುವರಿಯಾಗಿ ವಿಜ್ಞಾನ ವಿಷಯದಲ್ಲ್ಲಿ 1೦ ಅಂಕಗಳು ಹಾಗೂ ಹಿಂದಿ ಭಾಷೆಯಲ್ಲಿ 7ಅಂಕಗಳನ್ನು ಗಳಿಸುವ ಮೂಲಕ 90.88% ದಾಖಲಿಸಿ ಸರ್ವೋದಯ ಪ್ರೌಢಶಾಲೆಗೆ ಮೂರನೇ ಸ್ಥಾನ ಪಡೆದಿದ್ದಾಳೆ. ಗೌತಮಿಯ ಸಾಧನೆಗೆ ಸರ್ವೋದಯ ಶಿಕ್ಷಣ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು, ಸಮಿತಿಯ ಸದಸ್ಯರು, ಪ್ರೌಢಶಾಲೆಯ ಮುಖ್ಯಾಧ್ಯಾಪಕರು ಶಿಕ್ಷಕರು ಗ್ರಾಮಸ್ಥರು ಅಭಿನಂದಿಸಿದ್ದಾರೆ.
Prathidvani Yellapura