Breaking News

“ಅಖಿಲ ಕರ್ನಾಟಕ ಅಹಿಂದ ವೇದಿಕೆ” ಯಲ್ಲಾಪುರ ನಗರ ಘಟಕ ಸ್ಥಾಪನೆ  – ದ್ಯಾಮಣ್ಣ ಬೋವಿ ವಡ್ಡರ್.


ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ಅಹಿಂದ ಪರವಾದ ಧ್ವನಿ ಎತ್ತುವ ಸಲುವಾಗಿ ಈಗಾಗಲೆ” ಅಖಿಲ ಕರ್ನಾಟಕ ಅಹಿಂದ ವೇದಿಕೆ ” ಸ್ಥಾಪಿಸಿದ್ದು ಪ್ರಾರಂಭಿಕ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಘಟಕಗಳನ್ನು ಅನುಷ್ಟಾನಗೊಳಿಸಲು ಮುಂದಾಗಿದ್ದು ಇದೀಗ ಯಲ್ಲಾಪುರ ನಗರ ಘಟಕಕ್ಕೆ ಆಸಕ್ತ ಸದಸ್ಯರು ಸೇರಬಹುದಾಗಿದೆ ಎಂದು “ಅಖಿಲ ಕರ್ನಾಟಕ ಅಹಿಂದ ವೇದಿಕೆ ಸ್ಥಾಪಕಾಧ್ಯಕ್ಷ ದ್ಯಾಮಣ್ಣ ಬೋವಿ ವಡ್ಡರ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ಮೂಲಕ ಮನವಿ ಮಾಡಿದ್ದಾರೆ.


” ಅಖಿಲ ಕರ್ನಾಟಕ ಅಹಿಂದ ವೇದಿಕೆ ” ದ್ಯೇಯ ಉದ್ದೇಶ ಬಹಳ ಸ್ಪಷ್ಟವಾಗಿದೆ. ಶೋಷಿತರ ಪರವಾಗಿ ನ್ಯಾಯಕ್ಕಾಗಿ ಹೋರಾಟ,ಹಕ್ಕುಗಳ ರಕ್ಷಣೆಗಾಗಿ,ಸರ್ಕಾರ ಮಟ್ಟದಲ್ಲಿ ಸಮುದಾಯಕ್ಕೆ ದೊರಕಬೇಕಾದ ಸೌಲಭ್ಯಗಳ ಬಗ್ಗೆ ವ್ಯತ್ಯಾಸಗಳಾದಲ್ಲಿ ಎಚ್ಚರಿಸುವ ಧ್ವನಿಯಾಗುವುದು ಸಂಘಟನೆಯ ಮೂಲ ಉದ್ದೇಶವಾಗಿದೆ. ಧರ್ಮ,ಅಂತಸ್ತು, ರಾಜಕಾರಣ ಹೊರತುಪಡಿಸಿ ಸಂಘಟನೆಗೆ ಸಂಬಂಧಿಸಿದ ವಿಚಾರಧಾರೆಯಾಗಿದೆ.

ಏನನ್ನಾದರು ಸ್ವಾರ್ಥಪರವಾಗಿ ಪಡೆದುಕೊಳ್ಳುವುದಕ್ಕಿಂತ ಸಮಾಜಕ್ಕೆ ಏನನ್ನಾದರು ಒಳಿತನ್ನು ನೀಡುವುದು,ಯಾವುದೆ ಫಲಾಪೇಕ್ಷೆ ಇಲ್ಲದೆ ಸಂಘಟನೆಯಲ್ಲಿ ಸಕ್ರಿಯರಾಗುವ ಮನಸ್ಥಿತಿ ಇರುವವರು ಸಂಘಟನೆಯ ಭಾಗವಾಗಬಹುದಾಗಿದೆ. ಮೊದಲಿಗೆ ಯಲ್ಲಾಪುರ ತಾಲೂಕಿನಾಧ್ಯಂತ ಪ್ರತಿ ಪಂಚಾಯತ ಮಟ್ಟದಲ್ಲಿ ಅಹಿಂದ ವೇದಿಕೆ ಅನುಷ್ಟಾನಗೊಳಿಸುತ್ತಿದ್ದು ಅದರ ಭಾಗವಾಗಿ ಯಲ್ಲಾಪುರ ಪಟ್ಟಣದಲ್ಲಿ ಕ್ರಿಯಾಶೀಲ ಘಟಕ ಸ್ಥಾಪನೆಗೆ ಮುಂದಾಗಿದ್ದೇವೆ ಅಹಿಂದ ತತ್ವ ಒಪ್ಪಿರುವ ಮತ್ತು ಸಮಾಜದೊಂದಿಗೆ ಬೆರೆತು ಘಟನೆಯಲ್ಲಿ ಶ್ರಮಿಸುವವರು ಸೇರಿಕೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ ಎಂದು ಅಖಿಲ ಕರ್ನಾಟಕ ಅಹಿಂದ ವೇದಿಕೆ ಸ್ಥಾಪಕಾಧ್ಯಕ್ಷ ದ್ಯಾಮಣ್ಣ ಬೋವಿ ವಡ್ಡರ್ ಪ್ರತಿಧ್ವನಿಗೆ ಪ್ರತಿಕ್ರಿಯಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *