

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಜುಲೈ ತಿಂಗಳಲ್ಲಿ ಲೋಕ್ ಅದಾಲತ್ ನಡೆಯಲಿದ್ದು ರಾಜಿಯಾಗುವಂತಹ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಇದರಿಂದ ಹಣ, ಸಮಯ ಉಳಿಯುವುದಲ್ಲದೇ ಬಹುಸಮಯದಿಂದ ನಡೆಯುತ್ತಿರುವ ಪ್ರಕರಣಗಳ ಇತ್ಯರ್ಥವಾಗಲಿದೆ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿೆ.ಬಿ ಹಳ್ಳಕಾಯಿ ಹೇಳಿದರು.

ಅವರು ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ವಿವಿಧ ಇಲಾಖೆ, ಸಂಘ ಸಂಸ್ಥೆಗಳಿಗೆ ಕರೆಯಲಾಗಿದ್ದ ಲೋಕ್ ಅದಾಲತ್ನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಹೇಳಿದರು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಉಪಸ್ಥಿತರಿದ್ದರು. ಸಭೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿವರಾಯ ಎಚ್ ದೇಸಾಯಿ, ಜೀನತ್ಬಾನು ಶೇಖ, ತಹಸೀಲ್ದಾರ ಗುರುರಾಜ, ಇಡಗುಂದಿ ವಲಯ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಫೀಕಾ ಹಳ್ಳೂರು, ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ, ವಕೀಲರ ಸಂಘದ ಅಧ್ಯಕ್ಷರು , ವಕೀಲರಾದ ಸರಸ್ವತಿ ಜಿ ಭಟ್ಟ, ಎನ್.ಕೆ ಭಾಗ್ವತ, ಅಬಕಾರಿ ಪೊಲೀಸರು, ಸಹಕಾರಿ ಸಂಘ ಸಂಸ್ಥೆಗಳ ಪ್ರಮುಖರು , ಬ್ಯಾಂಕ್ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.





Prathidvani Yellapura