
ಪ್ರತಿಧ್ವನಿ ಯಲ್ಲಾಪುರ : ಯಾವುದೆ ಪೋಷಕರು ತಮ್ಮ ಮಕ್ಕಳ ಉಜ್ವಲ ಆರೋಗ್ಯ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ಕೈಗೊಳ್ಳುವ ಇಂತಹ ಸಾರ್ಥಕ ಕಾರ್ಯಕ್ರಮಗಳಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕಿದೆ. ಪೋಲಿಯೊ ಮುಕ್ತ ಭಾರತದ ಸಂಕಲ್ಪಕ್ಕೆ ಸಹಕಾರಿಯಾಗಲಿದೆ. ಇಂತಹ ಸಾರ್ಥಕ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆಯ ಸರ್ವರಿದು ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ “ರಾಷ್ಟ್ರೀಯ ಪಲ್ಸ್ ಪೋಲಿಯೊ” ಕಾರ್ಯಕ್ರಮವನ್ನು ಪುಟ್ಟ ಕಂದಮ್ಮಗಳಿಗೆ ಎರಡು ಪೊಲಿಯೊ ಹನಿ ಹಾಕುವ ಮೂಲಕ ಉದ್ಘಾಟಿಸಿ ಸಂದೇಶ ನೀಡಿದರು.



ಈ ಸಂದರ್ಭದಲ್ಲಿ ತಹಶಿಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಆರೋಗ್ಯಾಧಿಕಾರಿ ತಾಲೂಕು ಆಸ್ಪತ್ರೆ ವೈಧ್ಯಾಧಿಕಾರಿ ಡಾ,ನರೇಂದ್ರ ಪವಾರ್,ತಾಲೂಕಿನ ಪ್ರಮುಖ ಅಧಿಕಾರಿಗಳು,ಆರೋಗ್ಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.






Prathidvani Yellapura