Breaking News

ಕಣ್ಣಿಗೇರಿ ಮತ್ತು ಕಿರವತ್ತಿಯಲ್ಲಿ ಸಚಿವ ಹೆಬ್ಬಾರ್ ರಿಂದ ಕಾರ್ಯಕರ್ತರ ಸಭೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಯಲ್ಲಾಪುರ, ಏಪ್ರಿಲ್‌ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್‌ ಅವರು, ಇಂದು ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಭಾರತೀಯ ಜನತಾ ಪಕ್ಷಕ್ಕೆ ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಮೇಲಿನ ಅವರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ. ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ಜನರ ಮನಸ್ಸನ್ನು ಗೆದ್ದು ಮತ್ತೊಮ್ಮೆ ಜಯಭೇರಿ ಸಾಧಿಸಲು ನಾವೆಲ್ಲ ಒಗ್ಗಟ್ಟಿನಿಂದ ಇರೋಣ ಎಂದು ಹೇಳಿದರು.

ಈ ಸಭೆಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್‌ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *