
ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಧನಗರಗೌಳಿ ಯುವ ಸೇನೆ (KARDGYS) ವತಿಯಿಂದ 2025-26 ನೇ ಸಾಲಿನಲ್ಲಿ ನಡೆದ SSLC ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 80 ಕ್ಕಿಂತ ಅಧಿಕ ಅಂಕಗಳಿಸಿದ ಧನಗರಗೌಳಿ ಸಮಾಜದ ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮವನ್ನು ಯಲ್ಲಾಪುರ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟರಮಣ ಮಠದಲ್ಲಿ ದಿನಾಂಕ 12-07-2026, ಬೆಳಿಗ್ಗೆ 10.30ಕ್ಕೆ ಭಾನುವಾರದಂದು ಆಯೋಜಿಸಲಾಗಿದೆ.

ಕೊಡುಗೈದಾನಿ ಯುವ ನೇತಾರ ಬಾಲಕೃಷ್ಣ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆ ರಾಜ್ಯಾಧ್ಯಕ್ಷ ಸಂತೋಷ ವರಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ, ಕರ್ನಾಟಕ ರಾಜ್ಯ ಧನಗರ ಗೌಳಿ ಸಮುದಾಯ ರಾಜ್ಯಾಧ್ಯಕ್ಷ ದೇವು ಪಾಟೀಲ, ಗೌರವಾಧ್ಯಕ್ಷ ಲಕ್ಷ್ಮಣ ಬೊಡಕೆ ಘನ ಉಪಸ್ಥಿತಿ ಇರಲಿದ್ದು ಮುಖ್ಯ ವಕ್ತಾರರಾಗಿ ಧನಗರ ಗೌಳಿ ಯುವ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಸಿದ್ದು ತೋರಥ್ ಆಗಮಿಸುತ್ತಿದ್ದು ಸಮುದಾಯದ ಹಲವು ಪ್ರಮುಖರು ಹಿರಿಯರು ಮುಖ್ಯಾತಿಥಿಗಳಾಗಿ ಹಾಗು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಸಮುದಾಯದ ಸರ್ವರು ಹಾಗು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿಸಬೇಕೆಂದು ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆ ರಾಜ್ಯ ಖಜಾಂಚಿ ಲಕ್ಷ್ಮಣ ಕೋಕರೆ ಪ್ರತಿಧ್ವನಿಯಲ್ಲಿ ಮನವಿ ಮಾಡಿದ್ದಾರೆ.














Prathidvani Yellapura