Breaking News

ಹುಣಶೆಟ್ಟಿಕೊಪ್ಪದಲ್ಲಿ ಅತ್ಯಂತ ಅಪಾಯಕಾರಿ ಬಸ್ ನಿಲುಗಡೆ – ಟ್ರಾನ್ಸ್ ಫಾರ್ಮರ್ ಸ್ಥಳ ಬದಲಿಸದಿದ್ದರೆ ಜೀವ ಬಲಿ ಖಂಡಿತ.


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹುಣಶೆಟ್ಟಿಕೊಪ್ಪದಲ್ಲಿ ಬಸ್ ನಿಲುಗಡೆ ಮಾಡುವ ಸ್ಥಳದಲ್ಲಿ ಹೆಸ್ಕಾಂ ಸಂಬಂಧಿಸಿದ ಟ್ರಾನ್ಸಫಾರ್ಮರ್ ಇದ್ದು ಮಹಿಳೆಯರು ಮಕ್ಕಳು ವಯೋವೃದ್ದರು ಇದೇ ಸ್ಥಳದಲ್ಲಿ ಜಮಾಯಿಸಿ ಬಸ್ ಹತ್ತವುದರಿಂದ ಕೊ.ಚ ನಿರ್ಲಕ್ಷ್ಯ ತೋರಿದರು ವಿದ್ಯುತ್ ಅವಘಡಕ್ಕೆ ಜೀವ ಬಲಿಯಾಗುವುದು ಖಂಡಿತವಾಗಿದ್ದು ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ಭವಿಷ್ಯದಲ್ಲಿ ಆಗಬಹುದಾದ ಅನಾಹುತ ತಪ್ಪಿಸಬೇಕಿದೆ ಎಂಬುದು ಸ್ಥಳೀಯ ನಾಗರಿಕರ ಅಭಿಪ್ರಾಯವಾಗಿದೆ.


ಸುರಿಯುತ್ತಿರುವ ಮಳೆಯ ನಡುವೆ ಜನರು ವಿದ್ಯುತ್ ಎಚ್ಚರಿಕೆ ಯನ್ನು ಗಮನಿಸದೆ ಬಸ್ ಹತ್ತುವ ಬರದಲ್ಲಿ ಅವಘಡ ಸಂಭವಿಸುವ ಸಾದ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಟ್ರಾನ್ಸಫಾರ್ಮರ್ ಸ್ಥಳ ಬದಲಿಸಿ ಅಪಾಯ ತಪ್ಪಿಸಬೇಕಿದೆ.


ಇಂತಹ ಅಪಾಯ ಕಣ್ಣೆದುರಿಗಿದ್ದರು ಬಸ್ ಚಾಲಕರು ಸಹಿತ ಇದೇ ಸ್ಥಳದಲ್ಲಿ ಬಸ್ ನಿಲುಗಡೆ ಮಾಡುತ್ತಿರುವುದು ತಪ್ಪಾಗಲಿದ್ದು ಬದಲಿ ವ್ಯವಸ್ಥೆ ಆಗುವ ತನಕ ಕೊಂಚ ದೂರದಲ್ಲೆ ಬಸ್ ನಿಲುಗಡೆ ಸೂಕ್ತ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇದು ಅತ್ಯಂತ ಅಪಾಯಕಾರಿಯಾಗಲಿದ್ದು ಸಂಬಂಧಿಸಿದ ಹೆಸ್ಕಾಂ ಅಧಿಕಾರಿಗಳು ತ್ವರಿತವಾಗಿ‌ ಟ್ರಾನ್ಸಫಾರ್ಮರ್ ಸ್ಥಳ ಬದಲಿಸಬೇಕಿದೆ. ಕಣ್ಣ ಮುಂದೆಯೆ ಅಪಾಯ ಇಟ್ಟುಕೊಂಡು ನಿರ್ಲಕ್ಷ್ಯ ತೋರಿದರೆ ಮುಂದೆ ಬಾರಿ ಅವಘಡ ಸಂಭವಿಸಲಿದೆ. ಬಸ್ ಚಾಲಕರು ಸಹಿತ ಅಪಾಯಕಾರಿ ಸ್ಥಳಗಳಲ್ಲಿ ಕೊಂಚ ಎಚ್ಚರಿಕೆ ವಹಿಸಿ ಬಸ್ ನಿಲುಗಡೆ ಮಾಡುವುದು ಸೂಕ್ತ. ಸಾರ್ವಜನಿಕರು ಸಹ ಇಂತಹ ಅಪಾಯಕಾರಿ ಸ್ಥಳಗಳಲ್ಲಿ ಜಾಗ್ರತೆ ವಹಿಸಬೇಕಿದೆ. ವಿನಾಯಕ ತಿನೇಕರ್, ಸ್ಥಳೀಯ ಪ್ರಮುಖರು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *