
ಪ್ರತಿಧ್ವನಿ ಯಲ್ಲಾಪುರ : ಮನುಷ್ಯರನ್ನು ಮಾರಾಟ ಮಾಡುವುದು,ಖರೀದಿಸುವುದು,ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಅನಧಿಕೃತವಾಗಿ ಕದ್ದೊಯ್ಯುವುದು ಇವೆಲ್ಲವು ಸಹ ಮಹಾಪರಾಧವಾಗಿದೆ.ನಮ್ಮ ದೇಶದ ಕಾನೂನಿನಲ್ಲಿ ಮಾನವ ಕಳ್ಳಸಾಗಣಿಕೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ್ ಎಸ್ ಹೇಳಿದರು.

ಅವರು ಪಟ್ಟಣದ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಲ್ಲಾಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ” ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಿ ಜುಲೈ 30 ನ್ನು ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಾಗಿ ಆಚರಿಸಲು ನಿರ್ಧರಿಸಲಾಯಿತು. ಇದರ ಗಂಭೀರತೆ ಅರಿತು ಭಾರತದಲ್ಲಿಯು ಜನರಲ್ಲಿ ಜಾಗೃತಿ ಮೂಡಿಸಲು ದಿನಾಚರಣೆ ಅನುಕೂಲವಾಯಿತು ಎಂದು ಖ್ಯಾತ ವಕೀಲರಾದ ಪ್ರಕಾಶ್ ಜಿ ಭಟ್ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಎಸ್ಐ ರಾಜಶೇಖರ ವಂದಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಸಿವಿಲ್ ನ್ಯಾಯಾಧೀಶರು ಹಾಗು ಸದಸ್ಯ ಕಾರ್ಯದರ್ಶಿ ಕಾನೂನು ಸೇವಾ ಸಮಿತಿ ಅನಿತಾ ಕುಮಾರಿ ಎಸ್ , ಸರ್ಕಾರಿ ವಕೀಲರಾದ ಎಸ್.ಟಿ.ಗಾಂವ್ಕರ್, ಸಹಾಯಕ ಅಭಿಯೋಜಕರಾದ ಚೇತನ್ ಟಿ ನಾಯ್ಕ್, ವಕೀಲರಾದ ಸಂದೇಶ್ ಹೆಗಡೆ, ಅರೆಕಾಲಿಕ ಸ್ವಯಂ ಸೇವಕರಾದ ಸಂಜೀವ್ ಕುಮಾರ್ ಹೊಸ್ಕೇರಿ, ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ನಿರ್ದೇಶಕ ನಾಗರಾಜ್ ಮದ್ಗುಣಿ ಮತ್ತು ಶಾಲೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಇತರೆ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ,ಅರೆಕಾಲಿಕ ಸ್ವಯಂ ಸೇವಕ ಸುಧಾಕರ್ ನಾಯಕ ಕಾರ್ಯಕ್ರಮ ನಿರೂಪಿಸಿದರು.












Prathidvani Yellapura