Breaking News

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರಿಂದ ಶಾರದಾಗಲ್ಲಿಯಲ್ಲಿ ಕಾರ್ಯಕರ್ತರ ಸಭೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಯಲ್ಲಾಪುರ ನಗರ ಘಟಕ ವತಿಯಿಂದ ಪಟ್ಟಣದ ಶಾರದಾ ಗಲ್ಲಿಯಲ್ಲಿ ಬೂತ್ ಮಟ್ಟದ ಸಭೆಯು ಮಹಮದ್ ಹುಸೇನ್ ಅವರ ಮನೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅನ್ಯ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ವಿ.ಎಸ್ ಪಾಟೀಲ್ ರವರು ಶಾಲು ಹೊಂದಿಸಿ ಅಭಿನಂದಿಸಿ ಪಕ್ಷಕ್ಕೆ ಬರಮಾಡಿಕೊಂಡರು.


ತಾಲೂಕಿನ ಕಾಂಗ್ರೆಸ್ ಪ್ರಮುಖರಾದ ಎನ್.ಕೆ ಭಟ್ , ವಿ.ಎಸ್ ಭಟ್ , ರವಿ ನಾಯ್ಕ್, ಎಂಡಿ ಮುಲ್ಲಾ ಪಟ್ಟಣ ಪಂಚಾಯತ್ ಸದಸ್ಯರಾದ ನರ್ಮದ ನಾಯ್ಕ್ , ಕೈಸರಅಲಿ ಪೂಜಾ ನೇತ್ರೇಕರ್ , ಸರಸ್ವತಿ ಗುನುಗ , ಅನಿಲ್ ಮರಾಠೆ ,ಅಣ್ಣಪ್ಪ ನಾಯ್ಕ್ , ಪ್ರಕಾಶ್ ವಡ್ಡರ್ ,ನಿಸಾರ್ ಪಟೇಲ್ , ವೆಂಕಟೇಶ್ ದೇವರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು


ನಗರ ಘಟಕದ ಉಸ್ತುವಾರಿ ರವಿಚಂದ್ರನ್ ನಾಯಕ್ ಸ್ವಾಗತಿಸಿ ನಿರೂಪಿಸಿದರು. ಫೈರೋಜ್ ಸಯ್ಯದ್ ಅವರು ವಂದಿಸಿದರು. ಮಹಮ್ಮದ್ ಹುಸೇನ್ ,ರವಿ ಕಲಸನ್ನವರ್, ಬಶೀರ್ ಶೇಕ್ , ರಾಧ ಮಹಾಲೆ, ನಿಸಾರ್ ಅಹಮದ್ ,ಮಂಗಲ ಭಟ್ ,ಸುಧಾ ಚೌಗುಲೆ ,ನೀಲ ವಡ್ಡರ್ ಶಕುಂತಲಾ ಚೌಹಾನ್ ,ಪತಿಮಾ ಸಂಶುದ್ದೀನ್ ಶೇಕ್ ,ಸೈಯದ್ ಫ್ರಾನ್ಸಿಸ್ ,ಲಕ್ಷ್ಮಣ್ ಗೌಡ ಮುಂತಾದವರು ಪಕ್ಷಕ್ಕೆ ಸೇರಿದವರಾಗಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *