Breaking News

ಯಲ್ಲಾಪುರ ವಿಶ್ವದರ್ಶನದಲ್ಲಿ ನಡೆದ ” ವಂದೇ ಮಾತರಂ ಶಕ್ತಿ ಭಕ್ತಿ ” ಕಾರ್ಯಕ್ರಮ.


ಪ್ರತಿಧ್ವನಿ ಯಲ್ಲಾಪುರ : ವಂದೇಮಾತರಂ ಕೇವಲ ಒಂದು ಗೀತೆಯಲ್ಲ, ಸ್ವಾತಂತ್ರ‍್ಯ ಪೂರ್ವದಲ್ಲೂ ಸ್ವಾತಂತ್ರ‍್ಯೋತ್ತರದಲ್ಲೂ ಭಾರತವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ. ದೇಶಭಕ್ತಿಯ ಜಾಗರಣೆಯಲ್ಲಿ ಈ ಕಾದಂಬರಿ ಮಹತ್ವದ ಕೊಡುಗೆ ನೀಡಿದೆ ಎಂದು ಡಾ| ಮಹೇಶ ಭಟ್ಟ ಇಡಗುಂದಿ ಹೇಳಿದರು.


ಅವರು, ರವಿವಾರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಗಂಗಾಧರೇಂದ್ರಸರಸ್ವತೀ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಸಮಿತಿಯು “ವಂದೇಮಾತರಂ ಶಕ್ತಿ ಭಕ್ತಿ” ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ಬಂಕಿಮಚಂದ್ರರ ಆನಂದಮಠ ಕಾದಂಬರಿ ಆಧಾರಿತ ಚರ್ಚಾಗೋಷ್ಠಿಯ ಸಮನ್ವಯಕಾರರಾಗಿ ಮಾತನಾಡಿದರು.
ಶೈಕ್ಷಣಿಕ ಸಲಹೆಗಾರ ಡಾ| ದತ್ತಾತ್ರೇಯ ಗಾಂವ್ಕರ್ ಮಾತನಾಡಿ, ಕಾದಂಬರಿಯ ತಾತ್ವಿಕ ನೆಲೆಗಳನ್ನು ವಿಶ್ಲೇಷಿಸಿ, ಭಾರತದ ರಾಷ್ಟ್ರೀಯ ಆಂದೋಲನವನ್ನು ಸಮರ್ಪಕವಾಗಿ ಮುನ್ನಡೆಸಿದ ವಂದೇ ಮಾತರಂ ಗೀತೆ ಈ ಕಾದಂಬರಿಯ ಫಲಶೃತಿ, ಕಾದಂಬರಿಯ ಎಲ್ಲಾ ಮಜಲುಗಳೂ ಈ ದೇಶದ ಸಾಂಸ್ಕೃತಿಕ ಅಸ್ಮಿತೆಯನ್ನು ಸಾರುತ್ತವೆ ಎಂದರು.
ವಿ|ರಾಜಶೇಖರ ಧೂಳಿ ಮಾತನಾಡಿ, ಈ ಕಾದಂಬರಿಯು ಕೇವಲ ಬಂಗಾಳಕ್ಕಷ್ಟೇ ಸೀಮಿತವಾದದ್ದಲ್ಲ. ಈ ಸಾಹಿತ್ಯವೊಂದು ರಾಷ್ಟ್ರಕಟ್ಟುವ ಚಿಂತನೆ ಹೊಂದಿದ ಈ ಗೀತೆ ಮತ್ತು ಕಾದಂಬರಿಯ ಚಿಂತನೆಗಳು ದೇಶದ ಭವಿಷ್ಯತ್ತಿಗೆ ಭದ್ರ ಬುನಾದಿ ಹಾಕಿದೆ. ಶತಮಾನ ಕಳೆದರೂ ಇಂದಿಗೂ ಬಂಕಿಮ ಚಂದ್ರ ಚಟರ್ಜಿ ಯವರು ಬದುಕಿನ ಚೈತನ್ಯವನ್ನೇ ನೀಡಿ, ನಮ್ಮ ಬದುಕಿಗೆ ಆದರ್ಶಪ್ರಾಯರಾಗಿ ನಿಂತಿದ್ದಾರೆ ಎಂದರು.
ಅ.ಭಾ.ಸಾ.ಪ ತಾಲೂಕಾಧ್ಯಕ್ಷ ಜಿ.ಎಸ್.ಗಾಂವ್ಕರ ಕಂಚಿಪಾಲ ಉಪಸ್ಥಿತರಿದ್ದರು. ನಾಗಶ್ರೀ ಹೆಗಡೆ ಪ್ರಾರ್ಥಿಸಿದರು. ತಾಲೂಕಾ ಸಹಕಾರ್ಯದರ್ಶಿ ಪುಷ್ಪಾ ಮಾಳಕೊಪ್ಪ ಸ್ವಾಗತಿಸಿದರು. ಮಕ್ಕಳ ಪ್ರಕಾರದ ಮುಖ್ಯಸ್ಥೆ ಸುಜಾತಾ ಹೆಗಡೆ ಕಾಗಾರಕೊಡ್ಲು ನಿರ್ವಹಿಸಿದರು. ತಾಲುಕಾ ಕಾರ್ಯದರ್ಶಿ ಶ್ರೀರಾಮ ಲಾಲಗುಳಿ ವಂದಿಸಿದರು. ಪ್ರಸಾದಿನಿ ಭಟ್ಟ ವಂದೇಮಾತರಂ ಗೀತೆ ಪ್ರಸ್ತುತಪಡಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಸರಕ್ಕು ಪೂರಕ ಮನಸ್ಸಿಗು ನೆಮ್ಮದಿ  ಹೂ ಮತ್ತು ಹಣ್ಣಿನಗಿಡಗಳ ಪೋಷಣೆ – ಹಿಮವತಿ ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರ ಮನೆಗಳಲ್ಲಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸುವ ಅಭ್ಯಾಸ ಶ್ರೇಷ್ಠವಾದದ್ದು. ಅದನ್ನು ಪ್ರತಿಯೊಬ್ಬ ಮಹಿಳೆಯರೂ ರೂಢಿಸಿಕೊಳ್ಳಬೇಕು. …

Leave a Reply

Your email address will not be published. Required fields are marked *