Breaking News

ಯಲ್ಲಾಪುರ ಪೊಲೀಸರ ಕಾರ್ಯಾಚರಣೆ ನೈಜ ವಾರಸುದಾರರ ಕೈ ಸೇರಿದ ಮೊಬೈಲ್ ಫೋನ್ ಗಳು

ಪ್ರತಿಧ್ವನಿ ಯಲ್ಲಾಪುರ :  ಯಲ್ಲಾಪುರ ಪೊಲೀಸರ CEIR ಪೋರ್ಟಲ್ ಕಾರ್ಯಾಚರಣೆ – ಹತ್ತು ಮೊಬೈಲ್ ವಾರಸುದಾರರ ಕೈಗೆ.

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಕಳೆದುಕೊಳ್ಳುವುದು ಅಥವ ಕಳ್ಳತನವಾಗುವ ಪ್ರಕರಣಗಳು ಹೆಚ್ಚುತ್ತಲಿವೆ,ಪೊಲೀಸರು ವಿವಿಧ ರೂಪದಲ್ಲಿ ಜಾಗೃತಿ ಮೂಡಿಸುತ್ತಾ ಬಂದರು ಮೊಬೈಲ್ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚತ್ತಲೆ ಇವೆ.
ಯಲ್ಲಾಪುರ ಪೊಲೀಸರು ಮೊಬೈಲ್ ಕಾಣೆಯಾದ ಪ್ರಕರಣಗಳ ಬೆನ್ನು ಹತ್ತಿದ್ದು CEIR ಪೊರ್ಟಲ್ ಮೂಲಕ 10 ಮೊಬೈಲ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ತಲುಪಿಸಿದ್ದಾರೆ.

ಈ ಸಂದರ್ಭದಲ್ಲಿ ಪಿಎಸ್ಐ ಗಳಾದ ರಾಜಶೇಖರ ವಂದಲಿ, ಮಹಾವೀರ ಕಾಂಬ್ಳೆ ಉಪಸ್ಥಿತರಿದ್ದು ವಾರಸುದಾರರಿಗೆ ಮೊಬೈಲ್ ಹಸ್ತಾಂತರಿಸಿ ಮುಂದೆ ಜಾಗ್ರತೆಯಿಂದಿರಲು ಸೂಚಿಸಿದರು. ಮೊಬೈಲ್ ಪಡೆದ ವಾರಸುದಾರರು ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

https://www.facebook.com/share/v/1M5vB7J7H2/

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *