Breaking News

ಉತ್ತರ ಕನ್ಬಡ ಜಿಲ್ಲೆಯನ್ನು ಪ್ರಸ್ಥಾಪಿತ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರ್ಪಡೆಗೆ ಜಯ ಕರ್ನಾಟಕ ಸಂಘಟನೆ ವಿರೋದವಿದೆ – ವಿಲ್ಸನ್ ಫರ್ನಾಂಡೀಸ್.

ಪ್ರತಿಧ್ವನಿ ಯಲ್ಲಾಪುರ : ಇತ್ತೀಚೆಗೆ ಕೇಳಿ ಬರುತ್ತಿರುವಂತೆ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆ ಸೇರ್ಪಡೆ ಮಾಡುವ ಪ್ರಸ್ತಾಪ ಕೇಳಿ ಬರುತ್ತಿದ್ದು ಇಂತಹ ಅವೈಜ್ಞಾನಿಕ ನಿರ್ಧಾರವನ್ನು ರಾಜ್ಯದ ಕ್ರಿಯಾಶೀಲವಾದ “ಜಯ ಕರ್ನಾಟಕ ಸಂಘಟನೆ ” ಪ್ರಭಲವಾಗಿ ವಿರೋದಿಸುತ್ತದೆ ಎಂದು ಯಲ್ಲಾಪುರ ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ವಿಲ್ಸನ್ ಫರ್ನಾಂಡೀಸ್ ಪ್ರತಿಧ್ವನಿ ಯೊಂದಿಗೆ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಕ್ರಮಿಸುವ ದೂರ ಮತ್ತು ಸಮಯ ಹಾಗು ಆರ್ಥಿಕವಾಗಿಯು ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಹೊರೆಯಾಗಲಿದ್ದು ಇದೊಂದು ಅವೈಜ್ಞಾನಿಕ ಆಲೋಚನೆಯಾಗಿದೆ. ಇದರ ವಿರುದ್ದ ಯಾವುದೇ ಸಂಘಟನೆ ಹೋರಾಟಕ್ಕೆ ಮುಂದಾದರೆ ಜಯ ಕರ್ನಾಟಕ ಸಂಘಟನೆ ಸಂಪೂರ್ಣ ಬೆಂಬಲ ಘೋಷಿಸಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಹೇಳಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *