Breaking News

ಯಲ್ಲಾಪುರ ವಿದ್ಯುತ್ ಗುತ್ತಿಗೆದಾರರ ಸಂಘದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ.


ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ( ರಿ)ಯಲ್ಲಾಪುರ ಸಮಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ವನ್ನು ಸಂಘದ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿಯವರು ನೆರವೇರಿಸಿ ಮಾತನಾಡಿ ನಮ್ಮೇಲ್ಲರ ಹಿರಿಯರ ಬಲಿದಾನದಿಂದ ಅನೇಕ ವರ್ಷಗಳ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ಅದನ್ನು ನಾವೇಲ್ಲರೂ ನೆನೆಯ ಬೇಕು.ಇಂದಿನ ಯುವ ಪೀಳಿಗೆ ಅದರ ಮಹತ್ವವನ್ನು ಅರಿಯಬೇಕೆಂದರು.

ಮಲೆನಾಡು ಸೊಸೈಟಿ ಅಧ್ಯಕ್ಷರಾದ ಎಂ.ಆರ್.ಹೆಗಡೆ,ಕುಂಬ್ರಿಗುಡ್ಡೆ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಮಾಕಾಂತ ನಾಯ್ಕ, ನಿವೃತ್ತ ಶಿಕ್ಷಕರಾದ ಎಸ್.ಎಲ್.ಜಾಲಿಸತ್ಗಿಯವರು ಮಾತನಾಡಿದರು.ಈ ಸಂದರ್ಭದಲ್ಲಿ ಶಾಖಾಧಿಕಾರಿ ಗಳಾದ ನಾಗರಾಜ ಆಚಾರಿ,ಲಕ್ಷ್ಮಣ ಜೋಗಳೇಕರ,ಕನಕಪ್ಪ,ಛಾಯಪ್ಪ ಮುರಡಿ,ಲೇಕ್ಕಾದಿಕಾರಿ ವಿನಾಯಕ ಶೇಟ, ಸದಾಶಿವ ಭಟ್ಟ, ಕೃಷ್ಣ ಭಟ್ಟಮೊಠಾರಿ,ಗುತ್ತಿಗೆದಾರರ ಶಾಂತಾರಾಮ ಹೆಗಡೆ,ರಿಗನ್ ಡಿಸೋಜಾ, ಮಕ್ಬೂಲ್ ಸೈಯದ ಅಲಿ,ದಾದಾಪೀರ್, ಶ್ರೀನಿವಾಸ ಪಟಗಾರ, ಪ್ರಶಾಂತ ಮಹೇಕರ,ಮಾರುತಿ ಗೋವೆಕರ,ಜಾಫರ್, ನಾಗರಾಜ ಕೊರನಳ್ಳಿ,ಶಾಬಾದ್ ಶೇಖ್,ಹಸೇನಸಾಬ ಕಾನಳ್ಳಿ ಮುಂತಾದವರು ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *