
ಪ್ರತಿಧ್ವನಿ ಯಲ್ಲಾಪುರ : ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ನಡೆದ ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಕೊನೆ ಗಳಿಗೆಯವರೆಗು ಪಟ್ಟಿಯಲ್ಲಿ ಸ್ಥಾನ ಪಡೆದು ಅಂತಿಮ ಹಂತದಲ್ಲಿ ಪಟ್ಟಿಯಿಂದ ಹೊರಗುಳಿದು ರಾಜ್ಯಾದ್ಯಂತ ಸುದ್ದಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರನ್ನು ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸಿ ವಿಧಾನಸಭಾ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ಥಾವನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಶಿವರಾಮ ಹೆಬ್ಬಾರ್ ಕೂಡ ಸಾಥ್ ನೀಡಿದ್ದಾರೆ,ಜೊತೆಯಲ್ಲಿ ಉತ್ತರ ಕನ್ನಡ ಉಸ್ತುವಾರಿ ಮಂತ್ರಿ ಲಕ್ಷ್ಮಣ ಸವದಿ ಹಾಗು ಮಂತ್ರಿ ಹೆಚ್.ಸಿ.ಬಾಲಕೃಷ್ಣ ಕೂಡ ಉಪಸ್ಥಿತರಿದ್ದಾರೆ.

ಕಳೆದ ಬಾರಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮೀನುಗಾರಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಡಿ.ಕೆ.ಶಿ ಸಂಪುಟ ರಚನೆ ಸಂದರ್ಭದಲ್ಲಿ ಕೊನೆ ಹಂತದವರೆಗೆ ವೈದ್ಯ ಅವರ ಹೆಸರು ಮಂತ್ರಿ ಪಟ್ಟಿಯಲ್ಲಿ ಗಟ್ಟಿಯಾಗಿ ಕೇಳಿ ಬಂದಿತು ಅದಾವ ಮಾಯೆಯೊ ಎಂಬಂತೆ ಹೆಸರು ಘೋಷಣೆಯಾಗುತ್ತಲೆ ಮಂಕಾಳ ವೈದ್ಯರ ಹೆಸರು ಮಾಯವಾಗಿತ್ತು. ಇದೀಗ ಮೀನುಗಾರ ಸಮುದಾಯಗಳಿಗೆ ಸಮಾದಾನಪಡಿಸಲು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಾಡಲು ಡಿಕೆಶಿ ಮುಂದಾಗಿದ್ದಾರೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.









Prathidvani Yellapura