Breaking News

ಯಲ್ಲಾಪುರ ತಾಲೂಕಿನ ಖಾರೆವಾಡ ಮೂಲದ 33 ವರ್ಷದ ಚಾಂಗು ಪಟಕಾರೆಗೆ ಚಿಕಿತ್ಸೆಗೆ ಬೇಕಿದೆ ಆರ್ಥಿಕ ಸಹಾಯ.


ಪ್ರತಿಧ್ವನಿ ಯಲ್ಲಾಪುರ :ತಾಲೂಕಿನ ಖಾರೆವಾಡ ನಿವಾಸಿ  ಅತ್ಯಂತ ಹಿಂದುಳಿದ ಧನಗರ ಗೌಳಿ ಸಮುದಾಯದ ಕಡುಬಡವನಾಗಿರುವ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ, ಚಾಂಗು ಪಟಗಾರೆ ವಯಸ್ಸು 33 ವರ್ಷ ಎಂಬಾತ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ ಎರಡು ಬಾರಿ ಶಸ್ತ್ರಚಿಕಿತ್ಸೆ ಮಾಡಿ ಸುಮಾರು 10 ರಿಂದ 12 ಲಕ್ಷ ರೂಪಾಯಿ ಖರ್ಚು ಆಗಿರುತ್ತದೆ.ಹಾಗೆಯೇ,ಈಗ ಈ ಕ್ಯಾನ್ಸರ್ ರೋಗವು 3 ನೇ ಹಂತಕ್ಕೆ (Third Stage* ) ತಲುಪಿದೆ.ಈಗ ಮತ್ತೆ ಶಸ್ತ್ರಚಿಕಿತ್ಸೆ ಮಾಡಲು ಸುಮಾರು 7/8 ಲಕ್ಷ ರೂಪಾಯಿ ಖರ್ಚು ಆಗಬಹುದು ಎಂದು ವೈದ್ಯರು ತಿಳಿಸಿರುತ್ತಾರೆ, ಇವರಿಗೆ ಪತ್ನಿ ಹಾಗೂ ಮೂವರು ಪುಟ್ಟ ಮಕ್ಕಳಿದ್ದು, ಅತ್ಯಂತ ಕಷ್ಟಕರ ಸ್ಥಿತಿಯಲ್ಲಿ ಇದ್ದಾರೆ, ಆದ್ದರಿಂದ
ಕೈಲಾದ ಮಟ್ಟಿಗೆ ಧನ ಸಹಾಯ ಮಾಡಿ  ಬಡ ಕುಟುಂಬಕ್ಕೆ ಆಸರೆಯಾಗಿ ಎಂದು ಕುಟುಂಬದ ಸದಸ್ಯರು ಮತ್ತು ಅವರ ಆಪ್ತರು ಮಾದ್ಯಮದ ಮೂಲಕ ಜನತೆಯಲ್ಲಿ ಮನವಿ ಮಾಡಿದ್ದಾರೆ.

ನೇರವಾಗಿ ಮಾತನಾಡಲು ಸಂಪರ್ಕಿಸಿ : 9480700703
ಹಣ ಹಾಕಿದ ಮೇಲೆ Screen shot ಕಳುಹಿಸಿ ಎಂದು ಕುಟುಂಬದವರು ಕೇಳಿಕೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *