
ಪ್ರತಿಧ್ವನಿ,ಯಲ್ಲಾಪುರ : ವಿಪರೀತ ಕುಡಿತದ ಪರಿಣಾಮ ಮತ್ತು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮಂಜುನಾಥನಗರದಲ್ಲಿ ನಡೆದಿದೆ.

ಪಟ್ಟಣದ ಮಂಜುನಾಥನಗರ ನಿವಾಸಿ ಸುರೇಶ ದಾಮೋದರ ನಾಯ್(೫೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ವಿಪರೀತ ಸಾರಾಯಿ ಕುಡಿಯುವ ಚಟ ಹೊಂದಿದ್ದು ಅಲ್ಲದೇ ಕೆಲದಿನಗಳಿಂದ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡವನು ತನ್ನ ಮಲಗುವ ಕೋಣೆಯ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂಬುದಾಗಿ ಮೃತನ ಮಗ ಅನಿಲ್ ಎಂಬಾತನು ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾನೆ.
ದೂರು ದಾಖಲಿಸಿಕೊಂಡ ಯಲ್ಲಾಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿರುತ್ತಾರೆ.
Prathidvani Yellapura