Breaking News

ವೈ.ಟಿ.ಎಸ್.ಎಸ್ ಕನ್ನಡ ಮಾದ್ಯಮ ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಫಲಿತಾಂಶ : -96.07%


ಪ್ರತಿಧ್ವನಿ,ಯಲ್ಲಾಪುರ : 2022-23 ನೇ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ 96.07% ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಕುಳಿತ 102 ವಿದ್ಯಾರ್ಥಿಗಳಲ್ಲಿ 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಕುಮಾರ ದಿವಾಕರ ಗೇರಗದ್ದೆ 625 ಕ್ಕೆ 615 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ , ಕುಮಾರಿ ಶ್ರೀನಿಧಿ ನಾಯ್ಕ 604 ಅಂಕ ಗಳಿಸಿ ದ್ವಿತೀಯ ಹಾಗೂ ಕುಮಾರ ಸುದರ್ಶನ ಎಂ ಭಟ್ಟ 599 ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.
ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ರವಿಕುಮಾರ ಲಕ್ಷಣ ಶಾನಭಾಗ , ಉಪಾಧ್ಯಕ್ಷ ಪ್ರಸನ್ನ ಗುಡಿಗಾರ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರೂ ಪ್ರಾಂಶುಪಾಲೆ ವಾಣಿಶ್ರೀ ಹೆಗಡೆ , ಹಿರಿಯ ಶಿಕ್ಷಕ ಎನ್.ಎಸ್.ಭಟ್ಟ , ಮತ್ತು ಎಲ್ಲಾ ಉಪನ್ಯಾಸಕ/ಶಿಕ್ಷಕ, ಹಾಗೂ ಸಿಬ್ಬಂದಿ ವರ್ಗದವರೂ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವಿದ್ಯಾದಾನ ಮತ್ತು ನೇತ್ರದಾನ ಮಾಡಿದ ನಿವೃತ್ತ ಶಿಕ್ಷಕಿ ಭಾಗೀರಥಿ ಜನಾರ್ಧನ ಹೆಗಡೆ ನಿಧನ

ಪ್ರತಿಧ್ವನಿ ಯಲ್ಲಾಪುರ :  ನಿವೃತ್ತ ಶಿಕ್ಷಕಿ, ಶಿಕ್ಷಣಾಭಿಮಾನಿ ಹಾಗೂ ಸಮಾಜಮುಖಿ ವ್ಯಕ್ತಿತ್ವದ ತಾಲೂಕಿನ ಮಂಚಿಕೇರೆ ಬಳಿಯ ಕುಂಬ್ರಿಗುಡ್ಡೆಯ ಭಾಗೀರಥಿ ಜನಾರ್ದನ …

Leave a Reply

Your email address will not be published. Required fields are marked *