Breaking News

ಮಾಗೋಡು ಕಾಲೋನಿಯಲ್ಲಿ ಮಕ್ಕಳೊಂದಿಗೆ ವನಮಹೋತ್ಸವ ಆಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪರಿಸರ ಸಕಲ ಜೀವರಾಶಿಗು ಅತ್ಯವಶ್ಯಕವಾಗಿದೆ. ಅರಣ್ಯ ಸಂರಕ್ಷಣೆಯಿಂದ ಭೂಮಿಗೆ ಮಳೆ ಬೀಳಲು ಮನುಷ್ಯನಿಗೆ ಆರೋಗ್ಯಕರ ಗಾಳಿ ಸೇವನೆಗೆ, ಕಾಡು ಪ್ರಾಣಿಗಳ ಸಂತತಿ ಉಳಿಸಲು ಒಟ್ಟಿನಲ್ಲಿ ಆರೋಗ್ಯಕರ ಭೂಮಿಯ ವಾತಾವರಣಕ್ಕೆ ಅರಣ್ಯ ಉಳಿಸಿ ಬೆಳೆಸುವುದು ಅವಶ್ಯಕವಾಗಿದೆ ಎಂದು ಇಡಗುಂದಿ ವಲಯಾರಣ್ಯಾಧಿಕಾರಿ ಶಿಲ್ಪ ನಾಯ್ಕ್ ಶಾಲಾ ಮಕ್ಕಳಿಗೆ ವನಮಹೋತ್ಸವದ ಮಹತ್ವ ವಿವರಿಸಿದರು.
ಅವರು ತಾಲೂಕಿನ ಮಾಗೋಡು ಕಾಲೋನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಡಗುಂದಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಿಡ ನೆಟ್ಟು ವನಮಹೋತ್ಸವ ಆಚರಿಸುವುದರೊದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಇಡಗುಂದಿ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಶರಣಬಸು ದೇವರ, ಗ್ರಾಮಾರಣ್ಯ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷ ನರಸಿಂಹ ಭಟ್ , ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಲಾ ಹೆಗಡೆ, ಸಹ ಶಿಕ್ಷಕರಾದ ಶೈಲಾ ಭಟ್, ವಿನಾಯಕ ಎಸ್ ,ಡಿ ಎಂ ಸಿ ಸದಸ್ಯರು ಪಾಲಕರು, ಪೋಷಕರು ,ಊರಿನ ನಾಗರಿಕರು ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಗಿಡ ನೆಟ್ಟು ಸಂಭ್ರಮಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *