Breaking News

ಕ್ಷೇತ್ರಭೇದ ತೋರದ ಶಾಸಕ ಹೆಬ್ಬಾರ್ ದೇಶಪಾಂಡೆ , ಬೀಮಣ್ಣ ಕ್ಷೇತ್ರವನ್ನು ಬರಗಾಲ ಪೀಡಿತ ಘೂಷಣೆಗೆ ಮನವಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.


ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅದಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಪಕ್ಷಾತೀತವಾಗಿ ಕ್ಷೇತ್ರದ ಬೇಧವಿಲ್ಲದೆ ಘಟ್ಟದ ಮೇಲಿನ ತಾಲೂಕುಗಳ ಸರ್ವಜನತೆಯ ಪರವಾಗಿ ಮಳೆ ಕೊರತೆಯ ಕಾರಣ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಿದರು.
ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ತಾಲೂಕುಗಳಲ್ಲಿ ಮಳೆಗೆ ಯಾವಕೊರತೆ ಇಲ್ಲದೆ ಸುರಿಯುತ್ತಿದೆ ಆದರೆ ಘಟ್ಟದ ಮೇಲಿ ನ ತಾಲೂಕುಗಳಲ್ಲಿ ವಾಡಿಕೆಗಿಂತ 70% ಪ್ರತಿಶತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ರೈತರು ಕಂಗಾಲಾಗಿದ್ದಾರೆ .

ಇದು ನನ್ನ ಒಂದೇ ಕ್ಷೇತ್ರದ ಸಮಸ್ಯೆಯಲ್ಲ ಪಕ್ಕದಲ್ಲಿರುವ ದೇಶಪಾಂಡೆ ಅವರ ಹಳಿಯಾಳ ಬೀಮಣ್ಣ ನಾಯ್ಕ್ ಅವರ ಶಿರಸಿ ಕ್ಷೇತ್ರಗಳ ಕಥೆಯು ಇದೇ ಆಗಿದೆ. ಆದ್ದರಿಂದ ಸರ್ಕಾರ ಬರ ಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಕಂದಾಯ ಸಚಿವ ಕೃಷ್ಣಭೈರೆಗೌಡ ಅವರಲ್ಲಿ ಮನವಿ ಮಾಡಿದರು.
ಇಂಧನ ಇಲಾಖೆ ಹೊಸ ನಿಯಮಾವಳಿ ಜಾರಿಗೊಳಿಸಿರುವುದರಿಂದ ಪಂಚಾಯತ ವತಿಯಿಂದ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಡ್ಡಿಯಾಗುತ್ತಿದ್ದು ಇಲಾಖೆಯ ಕಠಿಣ ನಿಯಮಗಳನ್ನು ಸರಳೀಕರಿಸಬೇಕೆಂದು ಇಂಧನ ಖಾತೆ ಸಚಿವ ಕೆ‌ಜೆ.ಜಾಜ್೯ ಅವರಲ್ಲಿ ಮನವಿ ಮಾಡಿದರು.


ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜಕೀಯ ವಿರೋದವಿದ್ದರು ಜನರ ಮೂಲಭೂತ ಸೌಕರ್ಯ ಮತ್ತು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಯಾವುದೆ ಬೇಧ ತೋರದೆ ಘಟ್ಟದ ಮೇಲಿನ ಎಲ್ಲಾ ತಾಲೂಕಿನ ರೈತರ ದ್ವನಿಯಾಗಿ ಮನವಿ ಮಾಡಿರುವುದು ಶಾಸಕ ಹೆಬ್ಬಾರ್ ಅವರ ಪ್ರಬ್ಬುದ್ದ ರಾಜಕಾರಣಕ್ಕೆ ಸಲಾಂ ಎನ್ನುತ್ತಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *