

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.
ಪ್ರತಿಧ್ವನಿ,ಯಲ್ಲಾಪುರ: ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೂ ಗಟ್ಟಿಯಾದ ಸಂಬAಧವಿದ್ದು ಎಲ್ಲಿಯೂ ಒಡಕಿಗೆ ಅವಕಾಶವಿಲ್ಲ. ಆ ಕಾರಣದಿಂದಲೇ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗಿದೆ. ಶಾಸಕ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಕೆಲವರು ಇಲ್ಲಸಲ್ಲದ ವದಂತಿ ಹರಡುತ್ತಿದ್ದಾರೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ ಹೇಳಿದರು.

ಅವರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕೆಲವು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯಲ್ಲೂ ಸೋಲುವ ಭೀತಿಯಿಂದ ಪಕ್ಷದಲ್ಲಿ ಒಡಕು ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಎಂದಿಗೂ ಫಲಿಸದು ಎಂದರು.

ಜಿಲ್ಲೆಯಲ್ಲಿ ಬಹುತೇಕ ನಾಯಕರು ದೇಶಪಾಂಡೆಯವರ ಶಿಷ್ಯರಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯರೂ ಸಹ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಂದ ಉತ್ತಮ ಕೆಲಸ ನಡೆಯುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದಾರೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕವಿದ್ದು ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜ್ಞಾನೇಶ್ವರ ಗುಡಿಹಾಳ, ಸಿ.ಎಫ್.ನಾಯ್ಕ, ಕೃಷ್ಣ ಪಾಟೀಲ, ಸುಭಾಸ ಕೊರವೇಕರ, ದಿಲೀಪ ರೋಖಡೆ, ಅನಿಲ ನಾಯ್ಕ, ರವಿ ತೋರಣಗಟ್ಟಿ, ಗೋಪಾಲ ಪಾಟೀಲ್, ಎನ್.ಎನ್.ಹೆಬ್ಬಾರ, ನಾಗರಾಜ ಹಂಚಿನಮನಿ, ಸೌದಾಗರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Prathidvani Yellapura