Breaking News

ಯಲ್ಲಾಪುರದಲ್ಲಿ ತಾಲೂಕು ಮಟ್ಟದ ಕಾಲೇಜುಗಳ ಕ್ರೀಡಾಕೂಟ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಠ್ಯ ಮ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತದೆ ಜ್ಞಾನ ಬಲದೊಂದಿಗೆ ದೈಹಿಕ ಸಾಮರ್ಥ್ಯ ಅತ್ಯಗತ್ಯವಾಗಿದೆ.

ಪ್ರತಿಯೊಬ್ಬ ವಿದ್ಯಾರ್ಥಿ ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಕ್ರೀಡಾ ಸ್ಪೂರ್ತಿಯೊಂದಿಗೆ ಎಲ್ಲರು ಬೆರೆತು ಚಟುವಟಿಕೆಯಲ್ಲಿ ತೊಡಗಿಕೊಳ್ಳಿ ಎಂದು ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವಿ ಶಾನಬಾಗ್ ಹೇಳಿದರು.


ಅವರು ಪಟ್ಟಣದ ಪ್ರತಿಷ್ಟಿತ ವೈಟಿಎಸ್ಎಸ್ ವಿದ್ಯಾ ಸಂಸ್ಥೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಕಾಲೇಜು ಕ್ರೀಡಾ ಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಜಿಲ್ಲಾ ಮಟ್ಟದಲ್ಲಿ ಕ್ರೀಡೆಯಲ್ಲಿ ಹೆಸರು ಮಾಡಿದ ಕ್ರೀಡಾಪಟುಗಳು ಹೊತ್ತು ತಂದ ಕ್ರೀಡಾ ಜ್ಯೋತಿಯನ್ನು ಸಂಸ್ಥೆಯ ಅಧ್ಯಕ್ಷ ರವಿಶಾನಬಾಗ್ , ಸಹಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಸ್ವೀಕರಿಸಿ ಶುಭಕೋರಿದರು.


ಪಟ್ಟಣದ ವೈಟಿಎಸ್ಎಸ್, ವಿಶ್ವದರ್ಶನ, ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ತಾಲೂಕಿನ ಮಂಚಿಕೇರಿ, ಗುಳ್ಳಾಪುರ, ಕಿರವತ್ತಿ ಕಾಲೇಜುಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡವು.

ದೈಹಿಕ ಶಿಕ್ಷಕ ಗಂಗಾ ನಾಯಕ್ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿಶ್ವದರ್ಶನ ಕಾಲೇಜು ಪ್ರಾಂಶುಪಾಲ ಡಿ.ಕೆ.ಗಾಂವ್ಕರ್, ಕಿರವತ್ತಿ ಕಾಲೇಜು ಪ್ರಾಂಶುಪಾಲ ಸುಬಾಷ್ ನಾಯ್ಕ್, ಯಲ್ಲಾಪುರ ಸ.ಪ.ಕಾ ಪ್ರಾಂಶುಪಾಲ ಎಸ್.ಟಿ.ವೈದ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೈಟಿಎಸ್ಎಸ್ ಸಂಸ್ಥೆ ಪ್ರಾಂಶುಪಾಲ ಆನಂದ್ ಹೆಗಡೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ವಾಣಿಶ್ರೀ ಹೆಗಡೆ ನಿರೂಪಿಸಿದರು. ಅಶ್ವಿನಿ ವಂದಿಸಿದರು.
ನಂತರದಲ್ಲಿ ವಿವಿಧ ಸ್ಪರ್ಧೆಗಳು ಜರುಗಿದವು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *