Breaking News

ಅಂತೂ ಉದ್ಘಾಟನೆಗೊಂಡ ಡಮಾಮಿ ಸಿದ್ದಿ ಸಮುದಾಯ ಹೋಂ ಸ್ಟೇ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಿಂಗದಬೈಲ್ ನಲ್ಲಿ ಬುಡಕಟ್ಟು ಸಿದ್ದಿ ಸಮುದಾಯದ ಪ್ರವಾಸೋದ್ಯಮ ಹೋಂ ಸ್ಟೇ ವಿದ್ಯುಕ್ತವಾಗಿ ಲೋಕಾರ್ಪಣೆಗೊಂಡಿತು.


ಬುಡಕಟ್ಟು ಸಮುದಾಯದ ಆರ್ಥಿಕ ಪ್ರಗತಿಗೆ ಸ್ವಸಹಾಯ ಸಂಘದ ಅಡಿಯಲ್ಲಿ ಸಿದ್ದಿ ಬುಡಕಟ್ಟು ಮಹಿಳೆಯರಿಂದ ಸಂಘಟಿತವಾದ ಗುಂಪಿಗೆ ಸೀತಾರಾಮ ಸಂಜೀವಿನಿ ಸಂಘದ ಅಡಿಯಲ್ಲಿ ಡಮಾಮಿ ಸಿದ್ದಿ ಪ್ರವಾಸೋದ್ಯಮ ಹೋಂ ಸ್ಟೇ ಚಾಲನೆ ಪಡೆಯಿತು.


ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದರು.


ಸಮಾಜದಲ್ಲಿ ಅತ್ಯಂತ ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲರಾದ ಬುಡಕಟ್ಟು ಸಿದ್ದಿ ಸಮುದಾಯದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರವಾಸೋದ್ಯಮದ ಭಾಗವಾದ ಹೋಂ ಸ್ಟೇ ಅನುಕೂಲವಾಗಿದೆ. ನೈಸರ್ಗಿಕ ಮತ್ತು ಸಾಂಪ್ರದಾಯಿಕ ಆಚಾರದ ಸೇವೆಯಿಂದ ಬರುವ ಪ್ರವಾಸಿಗರಿಗೆ ಮೆಚ್ಚುಗೆಯಾಗುವಂತೆ ವ್ಯವಸ್ಥೆ ಕಲ್ಪಿಸಿ ಹೆಸರುಗಳಿಸಬೇಕಿದೆ. ಇಂತಹ ಯೋಜನೆ ಅನುಷ್ಟಾನಕ್ಕೆ ತರುವಲ್ಲಿ ಶ್ರಮಿಸಿದ ಪ್ರತಿಯೊಬ್ಬರಿಗು ಅಭಿನಂದಿಸುತ್ತೇನೆ ಎಂದು ಶಾಸಕ ಹೆಬ್ಬಾರ್ ಹೇಳಿದರು.


ಕಳೆದ ಬಾರಿ ಇದೇ ಹೋಂ ಸ್ಟೇ ಉದ್ಘಾಟನೆ ದಿನಾಂಕ ನಿಗದಿಯಾಗಿ ಕಾರ್ಯಕ್ರಮ ಆಯೋಜನೆಯಾದರು ಕೆಲವು ಕಾರಣಗಳಿಂದ ಉದ್ಘಾಟನೆಯಾಗದೆ ಹಾಗೆ ಮುಂದೂಡಲಾಗಿತ್ತು. ಇದೀಗ ಯಾವುದೆ ಅಡಚಣೆಗಳಾಗದೆ ಹೋಂ ಸ್ಟೇ ಪ್ರವಾಸಿಗರ ಆತಿಥ್ಯಕ್ಕೆ ಲೋಕಾರ್ಪಣೆ ಕಂಡಿತು.


ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಜಿಲ್ಲಾ ಪಂಚಾಯತ ಯೋಜನಾಧಿಕಾರಿ ಮಂಜುನಾಥ ನಾವಿ, ಸೀತಾರಾಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪ್ರೇಮಾ ಜೋಶಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಆರ್.ಹೆಗಡೆ, ನಿಸರ್ಗಸ್ಪರ್ಶ ಪ್ರವಾಸೋದ್ಯಮ ಸಂಘದ ಪ್ರತಿನಿಧಿಗಳಾದ ಲಲಿತ ಎಮ್ ಸಿದ್ದಿ, ವೀಣಾ ಎನ್ ಸಿದ್ದಿ ವಿವಿಧ ಇಲಾಖೆಯ ಅಧಿಕಾರಿಗಳು ಎನ್.ಆರ್.ಎಲ್.ಎಮ್ ವಿಭಾಗದ ಪ್ರಮುಖರು ಇಡಗುಂದಿ ಗಾಮಪಂಚಾಯತದ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *