


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ – ತಾಲೂಕಿನ ಕಿರವತ್ತಿ ಮತ್ತು ಮದನೂರು ಪಂಚಾಯತ ವ್ಯಾಪ್ತಿಯಲ್ಲಿ ಕೆಲವಾರು ಅಭಿವೃದ್ಧಿ ಪರ ಕಾರ್ಯಕ್ರಮದಲ್ಲಿ ಶಾಸಕ ಹೆಬ್ಬಾರ್ ಪಾಲ್ಗೊಂಡರು.

ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ 140 ಕ್ಕು ಹೆಚ್ಚು ಅಂಗವಿಕಲ ಮತ್ತು ವಿಧವ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದರು.

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೋಟಿ ಹಣ ಸರ್ಕಾರದಿಂದ ಬಿಡುಗಡೆ ಮಾಡಿಸಿ ತಂದಿದ್ದು ಕ್ಷೇತ್ರದ ಕುಟುಂಬದ ಮಗನಾಗಿ ನನ್ನ ಬದ್ದತೆಯ ಕಾರ್ಯ ಮಾಡಿದ್ದೇನೆ. ಮುಂದೆಯು ನಿಮ್ಮ ಆಶಿರ್ವಾದದಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರಿಗು ಹಾಗು ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ನವರಿಗು ಕೃತಜ್ಞತೆ ಸಲ್ಲಿಸುವೆ ಎಂದು ಮಂಜೂರಾತಿ ಪತ್ರ ವಿತರಿಸಿದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು.


ವೇದಿಕೆಯಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ವಿಜಯ್ ಮಿರಾಶಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಈ ಭಾಗದ ಪ್ರಮುಖ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ರಾಘುಗೊಂದಿ ಪಂಚಾಯತ ಅಭಿವೃದ್ಧಿ ಅಧಿಕಾರಿ, ಜನಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಇದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಕೇರಿ ಗ್ರಾಮದ 1 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು..

ಭಾವೈಕ್ಯತೆಗೆ ಹೆಸರಾದ ಗ್ರಾಮ ಅಲ್ಕೇರಿ ಅನ್ಯೋನ್ಯತೆ ಯಿಂದ ಜೀವನ ಸಾಗುಸುತ್ತಿರುವ ಬಡ ಮದ್ಯಮವರ್ಗದವರ ಬದುಕು ಇತರರಿಗೆ ಮಾದರಿಯಂತೆ ಬದುಕು ನಡೆಸುತ್ತಿದ್ದಾರೆ. ಅವರೆಲ್ಲರ ಜೀವನ ಸಂತಸದ ಪಥದಲ್ಲಿ ಸಾಗಬೇಕಿದೆ. ಇಲ್ಲಿನ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದ್ದು ಗ್ರಾಮಸ್ಥರು ಸಹ ಕೆಲಸದ ಸಮಯದಲ್ಲಿ ಸಹಕರಿಸಬೇಕಿದೆ ಎಂದು ಹೆಬ್ಬಾರ್ ಹೇಳಿದರು.


ಮದನೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲಗೋಡು ಸಮೀಪ ಸಣ್ಣ ನಿರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಗಳ ಅಡಿಯಲ್ಲಿ 878 ಲಕ್ಷಗಳ ವೆಚ್ಚದಲ್ಲಿ 200 ಕ್ಕು ಅಧಿಕ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರುಣಿಸುವ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ ಕಾರ್ಯ ನೆರವೇರಿಸಿದರು.



ಹುಣಶೆಟ್ಟಿಕೊಪ್ಪ ಶಾಲೆಯ ನೂತನ ಕೊಠಡಿಗಳನ್ನು ಶೈಕ್ಷಣಿಕ ಚಟುವಟಿಕೆಗೆ ಲೋಕಾರ್ಪಣೆ ಮಾಡಲಾಯಿತು. ಹಾಗು ವಸತಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.

ಒಟ್ಟಿನಲ್ಲಿ ಶಾಸಕ ಹೆಬ್ಬಾರ್ ಶನಿವಾರ ಕಿರವತ್ತಿ, ಮದನೂರು ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ 17 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.



Prathidvani Yellapura