Breaking News

ಜಿಲ್ಲಾಧಿಕಾರಿ ಲಕ್ಷೀಪ್ರಿಯ ಯಲ್ಲಾಪುರ ಭೇಟಿ ಕಳಚೆಗೆ ತೆರಳಿ ಭೂಕುಸಿತ ಪ್ರದೇಶಗಳ ವೀಕ್ಷಣೆ ಅಹವಾಲು ಸ್ವೀಕಾರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಕಳಚೆ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬತ್ತಿಹೋದ ಕನಸುಗಳಿಗೆ ಹೊಸ ಜೀವ ಬಂದಂತಾಗಿದೆ. ಹಲವರು ಪುನರ್ವಸತಿ ಕೇಳಿದರೆ ಮತ್ತೆ ಕೆಲವರು ಪರಿಹಾರ ನೀಡಿ ಎಂದರು.


       ಈ ಬಗ್ಗೆ ನಿರ್ಣಯ ಕೈಗೊಳ್ಳಲು ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಗ್ರಾಮಸಭೆ ನಡೆಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೌಖಿಕ ಆದೇಶ ನೀಡಿದರು. ಸಂತ್ರಸ್ತರಿಗೆ ಪುನರ್ವಸತಿ ಬೇಕೆ ಅಥವಾ ಪರಿಹಾರ ಬೇಕೆ ಎಂಬ ವಿಷಯದಲ್ಲಿನ ಗೊಂದಲವನ್ನು ಆ ಗ್ರಾಮಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಅವರು ಸೂಚಿಸಿದರು.


ಗುರುವಾರ ಯಲ್ಲಾಪುರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮೊದಲು ನೇರವಾಗಿ ಕಳಚೆಗೆ ತೆರಳಿದರು. ಅಲ್ಲಿನ ಕಮಲಾಕರ ಗಾಂವ್ಕರ್ ಅವರ ಮನೆ ಹಾಗೂ ಸುತ್ತಲಿನ ಪರಿಸರ ವೀಕ್ಷಿಸಿದರು. ತೋಟಕ್ಕೆ ತೆರಳಿ ಅಲ್ಲಾದ ಹಾನಿಯ ಬಗ್ಗೆ ಅಂದಾಜಿಸಿದರು. ರಸ್ತೆ ಬದಿಯ ಇನ್ನೆರಡು ತೋಟಗಳನ್ನು ವೀಕ್ಷಿಸಿ ಹಾನಿ ತಡೆಗೆ ಕೈಗೊಳ್ಳಬಹುದಾದ ಮಾರ್ಗಗಳ ಬಗ್ಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣನ್ನವರ್ ಹಾಗೂ ಕಂದಾಯ ನಿರೀಕ್ಷಕಿ ಜ್ಯೋತಿ ನಾಯ್ಕ ಅವರೊಂದಿಗೆ ಚರ್ಚಿಸಿದರು.

ತಳಕೆಬೈಲ್ ಭೂ ಕುಸಿತ ಸ್ಥಳ ವೀಕ್ಷಣೆ ಮಾಡಿದ ಅವರು ನಂತರ ಬೀಗಾರ್-ಬಾಗಿನಕಟ್ಟಾ ರಸ್ತೆ ಸಂಪರ್ಕ ಕಡಿತವಾಗಿರುವುದನ್ನು ಗಮನಿಸಿದರು.

ಅಲ್ಲಿದ್ದ ಜನ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.

 ಇಡೀ ಊರನ್ನು ಸ್ಥಳಾಂತರಿಸಲು ಕಾನೂನಿನಲ್ಲಿ ಅವಕಾಶವಿದ್ದು, ಕೆಲ ಕುಟುಂಬಗಳಿಗೆ ಮಾತ್ರ ಬೇರೆಡೆ ವಸತಿ ಕಲ್ಪಿಸುವುದು ಕಷ್ಟ. ವಸತಿಗೆ ಬೇರೆ ಜಾಗ ನೀಡಿ, ಪರಿಹಾರ ಕೊಡುವುದರ ಜೊತೆ ಇಲ್ಲಿನ ತೋಟವನ್ನು ಹಾಗೇ ಬಿಡಿ ಎಂಬ ಬೇಡಿಕೆ ಈಡೇರಿಕೆಗೆ ಅವಕಾಶವಿಲ್ಲ’ ಎಂದು ಅಲ್ಲಿದ್ದವರಿಗೆ ತಿಳಿಹೇಳಿದರು. `ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಣಯ ಕೈಗೊಂಡರೆ ಮಾತ್ರ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿ ಪುನರ್ವಸತಿ ಸಾಧ್ಯ’ ಎನ್ನುವದರ ಬಗ್ಗೆ ವಿವರಿಸಿದರು. ಗ್ರಾಮಸ್ಥರ ಮನವೊಲೈಸಿ ಸರಿಯಾದ ನಿರ್ಣಯ ಕೈಗೊಳ್ಳಲು ಸಹಾಯ ಮಾಡುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು.

ಅದಾದ ನಂತರ ಯಲ್ಲಾಪುರದ ಟಿ ಎಂ ಎಸ್ ಪಕ್ಕದ ನ್ಯಾಯಬೆಲೆ ಅಂಗಡಿ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಕಚೇರಿಯ ರೆಕಾರ್ಡ ರೂಂ’ಗೆ ತೆರಳಿ ದಾಖಲೆಗಳನ್ನು ಗಮನಿಸಿದರು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯವಿರುವ ಕಪಾಟುಗಳನ್ನು ಹಸ್ತಾಂತರಿಸಿದರು. ಗ್ರಾಮ ಆಡಳಿತಾಧಿಕಾರಿ ದೀಪಿಕಾ ಹೊಸ್ಮನಿ, ಪಿಡಿಓ ಗಂಗಾಧರ ಭಟ್ಟ, ತಾ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ ಧನವಾಡಕರ್ ಜೊತೆಗಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *