
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಆವಾರದ ಗಾಂಧಿ ಕುಟಿರದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 24 ವಿಕಲಚೇತರಿಗೆ ತ್ರಿಚಕ್ರವಾಹನ ವಿತರಿಸಿದರು.

ಸಮಾಜದಲ್ಲಿ ವಿಶೇಷ ಚೇತನರಿಗೆ ಸರ್ಕಾರಗಳು ಕಳಕಳಿ ತೋರುವುದು ಮತ್ತು ಅವರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಡುವುದು ಬದ್ದತೆಯ ಕಾರ್ಯವಾಗಿದೆ. ನನ್ನ ಪಾಲಿಗೆ ಬಂದ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಇಂತಹ ಸಾರ್ಥಕ ಕಾರ್ಯಕ್ಕೆ ಬಳಕೆಯಾಗುತ್ತಿರುವುದಕ್ಕೆ ತೃಪ್ತಿ ಇದೆ. ಸರ್ಕಾರದಿಂದ ನೀಡಿರುವ ವ್ಯವಸ್ಥೆಯ ಸದುಪಯೋಗ ಪಡೆದು ಗುಣ ಮಟ್ಟದ ನಿರ್ವಹಣೆ ಮಾಡಿಕೊಳ್ಳಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್, ಮಂಜುನಾಥ್ ಅಗೇರ್, ಪ್ರಮುಖರಾದ ಪ್ರಸಾದ್ ಹೆಗಡೆ ಇನ್ನಿತರ ಅಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.



Prathidvani Yellapura